ವಯೋವೃದ್ಧರಿಗೆ ಊರುಗೋಲು ವಿತರಣೆ ಹೆಮ್ಮೆಯ ಸಂಗತಿ: ಹೊಳೆ ಹುಚ್ಚೇಶ್ವರ ಸ್ವಾಮೀಜಿ

KannadaprabhaNewsNetwork | Published : Mar 16, 2025 1:46 AM

ಸಾರಾಂಶ

ನನ್ನ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲ ಸೇರಿ ಪಟ್ಟಣದಲ್ಲಿನ ವಯೋವೃದ್ಧರಿಗೆ ಊರುಗೋಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಕಮತಗಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಕಮತಗಿ

ನನ್ನ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲ ಸೇರಿ ಪಟ್ಟಣದಲ್ಲಿನ ವಯೋವೃದ್ಧರಿಗೆ ಊರುಗೋಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಕಮತಗಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿನ ವಿಶ್ವಚೇತನ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಮತಪುರ ನಾಡಿನ ಸಮಸ್ತ ಯುವ ಬಳಗದ ವತಿಯಿಂದ ಹಮ್ಮಿಕೊಂಡ ಜನ್ಮದಿನವನ್ನು ಕಮತಪುರ ಯುವಶಕ್ತಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನ್ಮದಿನ ನಿಮಿತ್ತ ಪಟ್ಟಣದಲ್ಲಿನ ವಯೋವೃದ್ಧರಿಗೆ ಬಸವ ಕ್ಲಿನಿಕ್ ವೈದ್ಯ ಡಾ. ಈರಣ್ಣ ಕೋಳೂರ ದಂಪತಿ ಉಚಿತವಾಗಿ ಊರುಗೋಲು ವಿತರಿಸಿದರು. ಪಟ್ಟಣದಲ್ಲಿನ ಎಲ್ಲ ಮನೆಗಳಿಗೆ ಶ್ರೀಗಳ ಜನ್ಮದಿನ ಪ್ರಯುಕ್ತ ಸಿಹಿ ವಿತರಿಸಲಾಯಿತು. ಇದೇ ವೇಳೆ ಕಮತಪುರ ಯುವರತ್ನ- 2025ರ ಪ್ರಶಸ್ತಿಯನ್ನು ಶಿಕ್ಷಕ ಶಕ್ತಿಶಂಕರ ಬಿಜಾಪೂರ ಅವರಿಗೆ ಪ್ರದಾನ ಮಾಡಲಾಯಿತು.

ಪಟ್ಟಣದಲ್ಲಿನ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಹುಚ್ಚೇಶ್ವರ ಧರ್ಮವಾಹಿನಿಯವರು, ಸಮಾಜದ ಗುರುಹಿರಿಯರು ಶ್ರೀಗಳಿಗೆ ಗೌರವಾರ್ಪಣೆ ಸಲ್ಲಿಸಿ ಆಶೀರ್ವಾದ ಪಡೆದರು.

ನಂತರ ನಡೆದ ಶಾಸ್ತ್ರೀಯ ಮತ್ತು ವಚನ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಜೈಪುರದ ಶಾಸ್ತ್ರೀಯ ಸಂಗೀತ ಕಲಾವಿದೆ ಸುಜಾತಾ ಗುರವ ಹಾಗೂ ಶಹನಾಯಿ ವಾದಕ ಮಂಜುನಾಥ ಭಜಂತ್ರಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಶಿವಾಚಾರ ಸಮಾಜದ ಅಧ್ಯಕ್ಷ ಎಂ.ಎಸ್. ಚೌಡಾಪೂರ, ಮುಖಂಡರಾದ ಸಿದ್ರಾಮಪ್ಪ ಕಡ್ಲಿಮಟ್ಟಿ, ಎಸ್.ಎಸ್. ಮಂಕಣಿ, ಎನ್.ಎಲ್. ತಹಶೀಲ್ದಾರ, ಪಪಂ ಮಾಜಿ ಅಧ್ಯಕ್ಷ ಮಹಾಂತೇಶ ಅಂಗಡಿ, ಪಪಂ ಮಾಜಿ ಸದಸ್ಯ ಸಿದ್ದು ಹೊಸಮನಿ, ನಾರಾಯಣ ದೇಶಪಾಂಡೆ, ಬಸವರಾಜ ಕುಂಬಳಾವತಿ, ಹುಚ್ಚೇಶ್ವರ ಧರ್ಮವಾಹಿನಿಯ ಸದಸ್ಯರು ಹಾಗೂ ಕಮತಪುರ ನಾಡಿನ ಸಮಸ್ತ ಗುರುಹಿರಿಯರು, ಯುವಕರು ಇದ್ದರು.

Share this article