ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯಲ್ಲಿ ಮಾತನಾಡಿ, ಡಿ.6 ರಂದು ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ 4 ಮಂದಿ ಫಲಾನುಭವಿಗಳಿಗೆ ಕಂದಾಯ ಸಚಿವರು ಸಾಗುವಳಿ ಚೀಟಿ ಹಾಗೂ ದುರಸ್ತಿಯಾದ ಆರ್ಟಿಸಿಯನ್ನು ವಿತರಿಸುವ ಸಮಾರಂಭ ನಿಗದಿಯಾಗಿದೆ ಎಂದರು. ತಾಲೂಕಿನ ಬಗರ್ಹುಕುಂ ಸಾಗುವಳಿ ಸಕ್ರಮೀಕರಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಗರ್ಹುಕುಂ ಆ್ಯಪ್ನಲ್ಲಿ ರಾಜ್ಯದ 163 ಸಾಗುವಳಿ ಸಕ್ರಮೀಕರಣ ಸಮಿತಿಗಳಲ್ಲಿ ಸಿರಸಿ ಹಾಗೂ ಗುಂಡ್ಲುಪೇಟೆ ಸಾಗುವಳಿ ಚೀಟಿ ಅನುಮೋದನೆ ಮಾಡಿದೆ ಎಂದರು.
ತಾಲೂಕಿನಲ್ಲಿ ನಡೆದ ಮೂರು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಮೊದಲ ಸಭೆಯಲ್ಲಿ 15, 2 ನೇ ಸಭೆಯಲ್ಲಿ 40, ಮೂರನೇ ಸಭೆಯಲ್ಲಿ (ಡಿ.3) 39 ಮಂದಿಗೆ ಸಾಗುವಳಿ ಚೀಟಿ ಸೇರಿ ಒಟ್ಟು 94 ಸಾಗುವಳಿ ಚೀಟಿಗಳನ್ನು ಆ್ಯಪ್ನಲ್ಲಿ ಅನುಮೋದನೆ ಮಾಡಲಾಗಿದೆ ಎಂದರು.ತಾಲೂಕಿನಲ್ಲಿ ಗೋಮಾಳ ಹಾಗೂ ಅರಣ್ಯ ಭೂಮಿಯಲ್ಲಿ ಸಾಗುವಳಿ ನೀಡಲು ಆಗುತ್ತಿಲ್ಲ. ಇದು ಸರ್ಕಾರ ಮಟ್ಟದಲ್ಲಿ ಆಗಬೇಕಾದ ತೀರ್ಮಾನವಾಗಿದೆ. ನಾನು ಕೂಡ ಸರ್ಕಾರದ ಗಮನ ಸೆಳೆದು ಸಾಗುವಳಿ ಚೀಟಿ ಕೊಡಲು ಪ್ರಯತ್ನಿಸುತ್ತೇನೆ ಎಂದರು. 1998ರ ಹಿಂದೆ ನೀಡಲಾದ ಸಾಗುವಳಿ ಚೀಟಿ ನೀಡಲಾಗಿದೆ. ಈಗ ಅರಣ್ಯ ಭೂಮಿ ಹಾಗೂ ಗೋಮಾಳದಲ್ಲಿ ಸಾಗುವಳಿ ನೀಡಲು ಕಾನೂನಿನ ತೊಡಕಿದೆ. ಅರಣ್ಯ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೇ ನಡೆಸಿ, ವರದಿ ಬಂದು ಸರ್ಕಾರ ಈ ಸಮಸ್ಯೆ ಬಗೆಹರಿಸುವ ತನಕ ಸಾಗುವಳಿ ಚೀಟಿದಾರರು ಕಾಯಬೇಕಿದೆ ಎಂದರು.
ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾದ ಪಿ.ಮಹದೇವಪ್ಪ, ಹಂಗಳ ನಾಗರಾಜು, ಕಲಾವತಿ ಮಹೇಶ್ ಸೇರಿದಂತೆ ಅಧಿಕಾರಿಗಳು ಹಾಗೂ ಫಲಾನುಭವಿಗಳಿದ್ದರು.