ವಿಕಲಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು

KannadaprabhaNewsNetwork |  
Published : Jan 05, 2024, 01:45 AM IST
ಮುದ್ದೇಬಿಹಾಳ ಪಟ್ಟಣದ ಮುಖ್ಯ ಬಜಾರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗಾಗಿ ಸಾಧನೆ ಸಲಕರಣೆಗಳ ವಿತರಣಾ ಸಮಾರಂಭವನ್ನು ಶಾಸಕ ಸಿ.ಎಸ್. ನಾಡಗೌಡ(ಅಪ್ಪಾಜಿ) ಉದ್ಘಾಟಿಸಿದರು. | Kannada Prabha

ಸಾರಾಂಶ

ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕು.. ದಿವ್ಯಾಂಗರು ದೇವರ ಮಕ್ಕಳಾಗಿದ್ದು, ಇವರನ್ನು ನಾವು ವಿಶೇಷವಾಗಿ ಗೌರವ ನೀಡಿ ನೋಡಿಕೊಳ್ಳಬೇಕು

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಎಲ್ಲ ಸಾಮಾನ್ಯ ಮಕ್ಕಳಂತೆ ಜೀವನ ನಡೆಸಲು ವಿಕಲಚೇತನ ಮಕ್ಕಳು ಸಹಿತ ಸರ್ಕಾರದಿಂದ ಸೌಲಭ್ಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ವಿಶೇಷ ಅಗತ್ಯವುಳ್ಳ ಮಕ್ಕಳು ಸಾಧನೆ ಸಲಕರಣೆಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ .ಸಿ.ಎಸ್ ನಾಡಗೌಡ(ಅಪ್ಪಾಜಿ) ಹೇಳಿದರು.

ಪಟ್ಟಣದ ಮುಖ್ಯ ಬಜಾರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆಯ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗಾಗಿ ಸರ್ವಶಿಕ್ಷಣ ಅಭಿಯಾನ ವತಿಯಿಂದ ವಿತರಿಸಿದ ಸಾಧನೆ ಸಲಕರಣೆಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕು.. ದಿವ್ಯಾಂಗರು ದೇವರ ಮಕ್ಕಳಾಗಿದ್ದು, ಇವರನ್ನು ನಾವು ವಿಶೇಷವಾಗಿ ಗೌರವ ನೀಡಿ ನೋಡಿಕೊಳ್ಳಬೇಕು. ವಿಶೇಷ ಚೇತನ ಮಕ್ಕಳ ಮನಸ್ಸಿನ ಕೊರತೆ ಆಗಬಾರದು. ಅಂಗ ವೈಕಲ್ಯವಾಗಿದ್ದರೆ ಬೇರೆ ಚಟುವಟಿಕೆಯಲ್ಲಿ ಹೆಚ್ಚಿನ ಶಕ್ತಿ ಹೊಂದಿರುತ್ತಾರೆ. ವಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ಮಿತಿ ಇಲ್ಲ. ಅಗತ್ಯ ಸಲಕರಣೆಗಳನ್ನು ವಿತರಿಸಬಹುದು ಎಂದರು.

ರಾಜ್ಯದಲ್ಲಿ ನಮ್ಮದೆ ಸರ್ಕಾರವಿದ್ದು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ವಿಶೇಷ ಮಕ್ಕಳ ಶೈಕ್ಷಣಿಕ ಹಾಗೂ ಆರ್ಥಿಕತೆಯ ಅಭಿವೃದ್ಧಿಗಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ರೂಪಿಸುವ ಮೂಲಕ ಉತ್ತಮ ಜನಪರ ಕೆಲಸ ಮಾಡುತ್ತಿದೆ ಎಂದರು.

ತಾಲೂಕು ಕ್ರೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ, ಕ್ರೇತ್ರ ಸಮನ್ವಯಾಧಿಕಾರಿ ಯು.ಬಿ. ಧರಿಕಾರ, ಆರೋಗ್ಯ ಇಲಾಖೆಯ ಡಾ. ಪ್ರವೀಣ, ತಾಪಂ ಯೋಜನಾ ಅಧಿಕಾರಿ ಖೂಬಾಶಿಂಗ್‌ ಜಾಧವ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಎಸ್. ಕವಡಿಮಟ್ಟಿ, ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್. ಮುದ್ನೂರ, ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಆರ್.ಡಿ. ಗೋರ್ಕಲ್, ಬಿಐಇಆರ್ ಟಿ ಎಸ್.ಎಸ್. ರಾಮಥಾಳ, ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ ಎಸ್.ಕೆ. ಘಾಟಿ ಸೇರಿದಂತೆ ಹಲವರು ಇದ್ದರು,

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ