ಎಸ್ ಜೆಎಂ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ

KannadaprabhaNewsNetwork |  
Published : Mar 18, 2026, 02:45 AM IST
ಎಸ್ ಜೆ ಎಂ ಪ್ರೌಢಶಾಲೆಯಲ್ಲಿ ಎಸ್ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಾಗ್ರಿ ವಿತರಣೆ | Kannada Prabha

ಸಾರಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಮೊದಲ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತು ಪರಿಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಸೋಮವಾರಪೇಟೆಯ ವೀರಕ್ತ ಮಠದ ಪೀಠಾಧಿಪತಿ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಮೊದಲ ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತು ಪರಿಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಸೋಮವಾರಪೇಟೆಯ ವೀರಕ್ತ ಮಠದ ಪೀಠಾಧಿಪತಿ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಇಲ್ಲಿನ ಎಸ್.ಜೆ.ಎಂ. ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷ ಸಾಮಗ್ರಿ ಮತ್ತು ಪ್ರವೇಶ ಪತ್ರ ವಿತರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಕರು ಮಾಡುವ ಪಾಠವನ್ನು ಗಮನದಿಂದ ಕೇಳಿ ಕಲಿಕೆಯಲ್ಲಿ ಮುನ್ನಡೆಯಬೇಕು. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕೂಡ ಕಲಿಸಿಕೊಡುತ್ತವೆ ಎಂದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಿಂದ ದೂರವಿದ್ದು, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಸಮಯ ಸಿಕ್ಕಾಗ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಸಾಮಾನ್ಯ ಜ್ಞಾನವೂ ಹೆಚ್ಚುತ್ತದೆ ಎಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಪರೀಕ್ಷೆ ಜೀವನದ ಮಹತ್ವದ ಹಂತವಾಗಿದ್ದು, ಶ್ರಮಪಟ್ಟು ಓದಿ ಉತ್ತಮ ಫಲಿತಾಂಶ ಗಳಿಸಬೇಕು ಎಂದು ಸಲಹೆ ನೀಡಿದರು.

ರಾಣಿ ರವೀಂದ್ರ ನಿರೂಪಿಸಿ, ಶಿವಕುಮಾರ್ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಎಚ್. ಮಾರಪ್ಪ, ಧನ್ಯ ಸುನಿಲ್, ಪೃಥ್ವಿ, ಪ್ರಕಾಶ್, ನೇತ್ರಾವತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಡುಬಿದಿರೆ: ಗೌರಿಕೆರೆ ಶ್ರೀ ರಾಮ ಮಂದಿರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಎಸ್ಸೆಸ್ಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 14151 ವಿದ್ಯಾರ್ಥಿಗಳು ಹಾಜರು