ಹಣ್ಣಿನ ವ್ಯಾಪಾರಸ್ಥರಿಂದ ಹಣ್ಣುಹಂಪಲು ವಿತರಣೆ

KannadaprabhaNewsNetwork |  
Published : Aug 27, 2026, 02:00 AM IST
26ಎಚ್ಎಸ್ಎನ್17 :  | Kannada Prabha

ಸಾರಾಂಶ

ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಈದ್ ಮಿಲಾದ್ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಹಳೆ ಮಟನ್ ಮಾರ್ಕೆಟ್ ಸುತ್ತಮುತ್ತಲಿನ ಸಣ್ಣ ವ್ಯಾಪಾರಸ್ಥರು ಹಾಗೂ ಆಟೋ ಚಾಲಕರು ಒಗ್ಗೂಡಿ ಸಾರ್ವಜನಿಕರಿಗೆ ವಿವಿಧ ಬಗೆಯ ಹಣ್ಣುಗಳನ್ನು ವಿತರಿಸುತ್ತಿದ್ದಾರೆ ಎಂದರು. ಹಳೆ ಮಟನ್ ಮಾರ್ಕೆಟ್ ವೃತ್ತದಲ್ಲಿ ಹಿಂದೂ-ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಅಣ್ಣತಮ್ಮಂದಿರಂತೆ ಒಗ್ಗಟ್ಟಿನಿಂದ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ಆಚರಣೆಯಲ್ಲ, ಎಲ್ಲ ವರ್ಗದ ಜನರ ಸಹಭಾಗಿತ್ವದೊಂದಿಗೆ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರದ ಹಳೆ ಮಟನ್ ಮಾರ್ಕೆಟ್ ವೃತ್ತದಲ್ಲಿ ಬುಧವಾರ ಮುಸ್ಲಿಂ ಹಾಗೂ ಹಿಂದೂ ಸಮುದಾಯದ ಸ್ಥಳೀಯ ಸಣ್ಣ ವ್ಯಾಪಾರಸ್ಥರು ಮತ್ತು ಆಟೋ ಚಾಲಕರು ಸೇರಿ ಸಾರ್ವಜನಿಕರಿಗೆ ವಿವಿಧ ಬಗೆಯ ಹಣ್ಣುಹಂಪಲು ವಿತರಿಸಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ಹಣ್ಣುಗಳನ್ನು ಕತ್ತರಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಘದ ಪರ್ವೀಜ್, ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಈದ್ ಮಿಲಾದ್ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಹಳೆ ಮಟನ್ ಮಾರ್ಕೆಟ್ ಸುತ್ತಮುತ್ತಲಿನ ಸಣ್ಣ ವ್ಯಾಪಾರಸ್ಥರು ಹಾಗೂ ಆಟೋ ಚಾಲಕರು ಒಗ್ಗೂಡಿ ಸಾರ್ವಜನಿಕರಿಗೆ ವಿವಿಧ ಬಗೆಯ ಹಣ್ಣುಗಳನ್ನು ವಿತರಿಸುತ್ತಿದ್ದಾರೆ ಎಂದರು. ಹಳೆ ಮಟನ್ ಮಾರ್ಕೆಟ್ ವೃತ್ತದಲ್ಲಿ ಹಿಂದೂ-ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಅಣ್ಣತಮ್ಮಂದಿರಂತೆ ಒಗ್ಗಟ್ಟಿನಿಂದ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ಆಚರಣೆಯಲ್ಲ, ಎಲ್ಲ ವರ್ಗದ ಜನರ ಸಹಭಾಗಿತ್ವದೊಂದಿಗೆ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಹಲವು ವರ್ಷಗಳಿಂದಲೂ ಈದ್ ಮಿಲಾದ್ ಪ್ರಯುಕ್ತ ಈ ರೀತಿಯ ಕಾರ್ಯಕ್ರಮವನ್ನು ಶಾಂತಿಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು. ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಳಿಗ್ಗಿನಿಂದ ರಾತ್ರಿ ೯ ಗಂಟೆಯವರೆಗೂ ಈ ಹಣ್ಣು ವಿತರಣೆ ಕಾರ್ಯಕ್ರಮ ನಡೆಸುವುದಾಗಿ ಹೇಳಿದರು.

ಇದೇ ವೇಳೆ ಅಧ್ಯಕ್ಷ ಸಾಧಿಕ್, ಫಾರೂಕ್, ಅಪ್ಪು, ನಜೀರ್‌, ಸಮೀರ್‌ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಸಾರ್ವಜನಿಕ ಚರ್ಚೆಗೆ ಸಿದ್ಧ
ಸಹಕಾರ ಸಂಘಕ್ಕೆ ಸದಸ್ಯರ ಬೆಂಬಲ ಅಗತ್ಯ: ಸಚಿವ ಚಲುವರಾಯಸ್ವಾಮಿ