ಎಚ್ಡಿಕೆ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

KannadaprabhaNewsNetwork |  
Published : Dec 17, 2024, 12:45 AM IST
16ಕೆಎಂಎನ್ ಡಿ32 | Kannada Prabha

ಸಾರಾಂಶ

ತಾಯಿ ಚಾಮುಂಡೇಶ್ವರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ನೀಡುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಸಿಎಂ ಆಗಿ ರಾಜ್ಯದ ರೈತರು, ಬಡವರು, ಶೋಷಿತರು, ದೀನದಲಿತರ ಪರವಾಗಿ ಕೆಲಸ ಮಾಡುವ ಶಕ್ತಿ ನೀಡಲೆಂದು ಹಾರೈಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕೇಂದ್ರ ಸಚಿವ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿಮಾನಿಗಳು ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪುರಸಭೆ ಸದಸ್ಯ ಆರ್.ಸೋಮಶೇಖರ್ ನೇತೃತ್ವದಲ್ಲಿ ಜೆಡಿಎಸ್ ಕಾರ್‍ಯಕರ್ತರು ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ನೆಚ್ಚಿನ ನಾಯಕರಿಗೆ ಶುಭಕೋರಿದರು.

ಪುರಸಭೆ ಸದಸ್ಯ ಆರ್.ಸೋಮಶೇಖರ್ ಮಾತನಾಡಿ, ಕೇಂದ್ರದ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಕೆಲಸ ಮಾಡುತ್ತಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ ಎಂದರು.

ತಾಯಿ ಚಾಮುಂಡೇಶ್ವರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ನೀಡುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಸಿಎಂ ಆಗಿ ರಾಜ್ಯದ ರೈತರು, ಬಡವರು, ಶೋಷಿತರು, ದೀನದಲಿತರ ಪರವಾಗಿ ಕೆಲಸ ಮಾಡುವ ಶಕ್ತಿ ನೀಡಲೆಂದು ಹಾರೈಸಿದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ, ಸದಸ್ಯ ಎಂ.ಗಿರೀಶ್, ಜೆಡಿಎಸ್ ಮುಖಂಡ ಚಿಕ್ಕಾಡೆ ಚೇತನ್, ರಾಜೇಶ್, ಬೊಮ್ಮರಾಜು, ರಾಚಯ್ಯ, ಗುರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇಂದು ಕನ್ನಡ ನಿತ್ಯೋತ್ಸವ ಕಾರ್ಯಕ್ರಮ: ಯೋಗಣ್ಣ

ಮಂಡ್ಯ:

ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಡಿ.17 ರಂದು ನಗರದ ಬಾಲಭವನದಲ್ಲಿ ಕನ್ನಡ ನಿತ್ಯೋತ್ಸವವನ್ನು ಆಯೋಜಿಸಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೂ ಮುನ್ನ ಮಧ್ಯಾಹ್ನ ನಗರದ ಕಾಳಿಕಾಂಭ ದೇವಾಲಯದಿಂದ ಬಾಲಭವನದವರೆಗೆ ವಿವಿಧ ಕಲಾತಂಡಗಳ ಮೆರವಣಿಗೆ ನಡೆಸಲಾಗುವುದು. ಸಂಜೆ ಹಾಸ್ಯ ಕಲಾವಿದರು ಹಾಗೂ ಕಿರುತೆರೆ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ.ಮನೋಹರ್ ನೆರವೇರಿಸುವರು. ಶಾಸಕ ರವಿಕುಮಾರ್‌ಗೌಡ ಉದ್ಘಾಟಿಸುವರು. ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್ ಅಧ್ಯಕ್ಷತೆ ವಹಿಸುವರು. ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್(ನಾಗೇಶ್) ಮರವಣಿಗೆಗೆ ಚಾಲನೆ ನೀಡುವರು. ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ, ಪ್ರಧಾನ ಕಾರ್ಯದರ್ಶಿ ರಜತ್ ಗಗನ್‌ರಾಜ್, ಹಿರಿಯ ಉಪಾಧ್ಯಕ್ಷ ಮನಿಸ್ವಾಮಿ, ಸಂಘಟನಾ ಕಾರ್ಯದರ್ಶಿಗಳಾದ ಮೊಹಮ್ಮದ್ ಇಲಿಯಾಜ್, ಮ್ಯಾಥ್ಯೂ ಘನ ಉಪಸ್ಥಿತಿ ವಹಿಸುವರು ಎಂದು ತಿಳಿಸಿದರು.

ವೇದಿಕೆಯಲ್ಲಿ ಯೋಧರು, ಪ್ರಗತಿಪರ ರೈತರು ಹಾಗೂ ಖ್ಯಾತ ವೈದ್ಯರುಗಳನ್ನು ಸನ್ಮಾನಿಸಲಾಗುವುದು. ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ, ಉಪಾಧ್ಯಕ್ಷ ಗೌತಮ್, ತಾಲ್ಲೂಕು ಅಧ್ಯಕ್ಷ ಉಮೇಶ್, ಪುನಿತ್, ಮಂಜು, ಕಿಶನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ