
ರಾಮನಗರ: ರಾಮನಗರ ಕ್ಷೇತ್ರ ವ್ಯಾಪ್ತಿಯಲ್ಲಿ 300 ಎಕರೆ ಭೂಮಿ ಗುರುತಿಸಿದ್ದು, 10 ಸಾವಿರ ಕಡು ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಕೆಲವು ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗಿದ್ದು, ಅವರಿಗೆ ಸೂಕ್ತ ದಾಖಲೆಗಳಿಲ್ಲ. ಅಂತವರಿಗೆ ಹಕ್ಕು ಕೊಡುವ ಕೆಲಸ ಮಾಡಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಸಬಾ, ಕೈಲಾಂಚ ಹೋಬಳಿಗಳ ಎಲ್ಲ ಹಳ್ಳಿಗಳ ಪ್ರತಿ ಮನೆ ಮನೆಗೆ 280 ಕೋಟಿ ರೂ ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಬಹುಮುಖ್ಯವಾಗಿ ಹಲವು ವರ್ಷಗಳಿಂದ ರೈತರು ಉಳುಮೆ ಮಾಡಿಕೊಂಡು ಬರುತ್ತಿರುವ ಸಾಗುವಳಿ ಭೂಮಿಗೆ ಸಿ.ಎಂ.ಲಿಂಗಪ್ಪ ಹೊರತು ಪಡಿಸಿ ಈ ಹಿಂದೆ ಶಾಸಕರಾದವರು ಬಗರ್ ಹುಕ್ಕುಂ ಸಾಗುವಳಿ ಸಮಿತಿ ಸಭೆ ನಡೆಸಿ ರೈತರ ಭೂಮಿಗೆ ಹಕ್ಕು ನೀಡದ ಪರಿಣಾಮ ನನಗೆ ಆ ವಿಷಯದಲ್ಲಿ ಹೆಚ್ವಿನ ಜವಾಬ್ದಾರಿಯಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಅರ್ಜಿ ವಿಲೇವಾರಿಗೆ ಕ್ರಮ ವಹಿಸಿದ್ದೇನೆ. ಇದರಲ್ಲಿ ಅಧಿಕಾರಿಗಳು ನನಗೆ ಸಹಕಾರ ಕೊಟ್ಟಿದ್ದು, ಎಲ್ಲ ಇಲಾಖಾ ಅಧಿಕಾರಿಗಳು ತಮ್ಮ ಪರಿಮಿತಿಯಲ್ಲಿ ಸರ್ಕಾರದ ಸವಲತ್ತುಗಳು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದರು.ಯೋಜನೆಗಳ ಸಾಕಾರ :
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ತಾಲೂಕು ಅಧ್ಯಕ್ಷ ವಿ.ಹೆಚ್.ರಾಜು, ತಹಸೀಲ್ದಾರ್ ತೇಜಸ್ವಿನಿ, ಪಿಡಿಓ ದಯಾನಂದ್, ಬಿಇಒ ಸೋಮಲಿಂಗಯ್ಯ ಅಧಿಕಾರಿಗಳಾದ ನೂತನ್, ಕೃಷ್ಣಮೂರ್ತಿ, ರವಿಕುಮಾರ್, ರಘು, ಲಾವಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.