ಮೇವಿನ ಕೊರತೆ ನೀಗಿಸಲು ರೈತರಿಗೆ ಮೇವಿನ ಬೀಜಗಳ ಕಿಟ್ ವಿತರಣೆ

KannadaprabhaNewsNetwork |  
Published : May 07, 2024, 01:03 AM IST
ಕಿಟ್ | Kannada Prabha

ಸಾರಾಂಶ

ಜಿಲ್ಲೆಯ 5 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯ 5 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳಾಗಿ ಘೋಷಣೆ ಮಾಡಿದ್ದು ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತದ ಸಹಕಾರದೊಂದಿಗೆ ಎಲ್ಲಾ ಮುಂಜಾಗ್ರತಾ ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯ ಪ್ರಕಾರ 76920 ಜಾನುವಾರುಗಳು 8553 ಕುರಿ ಮತ್ತು ಮೇಕೆಗಳಿದ್ದು, ಸದ್ಯದ ಮಟ್ಟಿಗೆ ಜಿಲ್ಲೆಯಲ್ಲಿ ಮೇವಿನ ಕೊರತೆ ಕಂಡು ಬಂದಿರುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಮೇವಿನ ಕೊರತೆ ಉಂಟಾಗದಂತೆ ಮೇವಿನ ಬೀಜಗಳ 476 ಎಟಿಎಂ ಹಾಗೂ 309 ಸರ‍್ಗಂ ಮಿನಿ ಕಿಟ್‌ಗಳನ್ನು ಆಸಕ್ತ ನೀರಾವರಿ ಸೌಲಭ್ಯ ಇರುವ ಜಾನುವಾರು ಹೊಂದಿದ ರೈತಬಾಂಧವರಿಗೆ ವಿತರಿಸಲಾಗುತ್ತಿದ್ದು, ಇದರಲ್ಲಿ ಎ.ಟಿ.ಎಂ, ಏಕವಾರ್ಷಿಕ ಬೆಳೆಯಾಗಿದ್ದು ಮತ್ತು ಸರ‍್ಗಂ ಬಹುವಾರ್ಷಿಕ ಬೆಳೆಯಾಗಿರುತ್ತದೆ.

ಮೇವು ಬೀಜಗಳನ್ನು ಬಿತ್ತನೆ ಮಾಡಿದ 60 ರಿಂದ 75 ದಿನದೊಳಗೆ ಮೇವು ಕಟಾವಿಗೆ ಬರುತ್ತದೆ. ನಂತರ 2 ತಿಂಗಳಿಗೊಂದಾವರ್ತಿಯಂತೆ ಮೂರ್ನಾಲ್ಕು ಬಾರಿ ಮೇವು ಕಟಾವು ಮಾಡಬಹುದಾಗಿದೆ. ಹಾಗೆಯೇ ಜಿಲ್ಲೆಯಲ್ಲಿ ಏಪ್ರಿಲ್, 1 ರಿಂದ ಮೇ 10 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕಾ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶರಾದ ಡಾ ಎಚ್.ಲಿಂಗರಾಜ್ ದೊಡ್ಡಮನಿ ಅವರು ತಿಳಿಸಿದ್ದಾರೆ.

ಆಸಕ್ತ ರೈತರು ತಮ್ಮ ತಾಲೂಕಿಗೆ ಸಂಬಂಧಿಸಿದಂತೆ ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ಮಡಿಕೇರಿ 9448647276, ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ಸೋಮವಾರಪೇಟೆ 9448597496, ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ಕುಶಾಲನಗರ 9448422269, ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ವಿರಾಜಪೇಟೆ 9141093996, ಸಹಾಯಕ ನಿರ್ದೇಶಕರು ಪಶುವೈದ್ಯ ಆಸ್ಪತ್ರೆ ಪೊನ್ನಂಪೇಟೆ 9480616717 ಅವರನ್ನು ಸಂಪರ್ಕಿಸಿ ತಮ್ಮ ಆಧಾರ್ ಕಾರ್ಡ್, ಆರ್‌ಟಿಸಿ ಹಾಗೂ ಫ್ರೂಟ್ ಐಡಿ ಪ್ರತಿಗಳನ್ನು ಸಲ್ಲಿಸಿ ಮೇವಿನ ಕಿರು ಪೊಟ್ಟಣಗಳನ್ನು ಪಡೆಯಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ: ಸುರ್ಜೇವಾಲಾ ವಿಶ್ವಾಸ
ದಾವಣಗೆರೆ ಟಿಕೆಟ್‌ ಘೋಷಣೆ ಮುನ್ನವೇ ಕೈ ನಾಮಪತ್ರ