ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಕ್ಲಬ್ ಅಧ್ಯಕ್ಷ ಟಿ.ಪಿ.ರೇವಣ್ಣ ನೇತೃತ್ವದಲ್ಲಿ ಸೋಮವಾರ ಪಟ್ಟಣದ ಮಂಡ್ಯ ಸರ್ಕಲ್, ಹಳೇಬಸ್ ನಿಲ್ದಾಣದಲ್ಲಿ ರಸ್ತೆ ಬದಿಗಳಲ್ಲಿ ಹಣ್ಣು, ತರಕಾರಿ, ಹೂ, ನಿಂಬೆಹಣ್ಣು, ಎಲೆ-ಅಡಿಕೆ ವ್ಯಾಪಾರ ಮಾಡುವ ರಸ್ತೆ ಬದಿ ವ್ಯಾಪಾರಿಗಳಿಗೆ 40 ಸಾವಿರ ರು. ವೆಚ್ಚದಲ್ಲಿ 20ಕ್ಕೂ ಅಧಿಕ ಛತ್ರಿಗಳನ್ನು ವಿತರಿಸಿದರು.
ಕ್ಲಬ್ ಅಧ್ಯಕ್ಷ ಟಿ.ಪಿ.ರೇವಣ್ಣ ಮಾತನಾಡಿ, ಪಟ್ಟಣದ ಆಸ್ಪತ್ರೆ ಆವರಣದಲ್ಲಿ ರೋಗಿಗಳು ವಿಶ್ರಾಂತಿ ಪಡೆಯಲು ವಿಶ್ರಾಂತಿ ಬೇಚ್ಗಳನ್ನು ನಿರ್ಮಿಸಿ ಕೊಂಡುವಂತೆ ಇಲ್ಲಿನ ಆಡಳಿತ ವೈದ್ಯಾಧಿಕಾರಿಗಳು ಮನವಿ ಮಾಡಿದ್ದರು. ಅದರಂತೆ ಫ್ರೆಂಚ್ರಾಕ್ಸ್ ಲಯನ್ಸ್ ಕ್ಲಬ್ ಆಫ್ ಪಾಂಡವಪುರ ಸಂಸ್ಥೆ ವತಿಯಿಂದ 3 ವಿಶ್ರಾಂತಿ ಬೇಂಚ್ಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.ಪಟ್ಟಣದ ಹಳೇಬಸ್ ನಿಲ್ದಾಣ, ಮಂಡ್ಯ ಸರ್ಕಲ್ ಸೇರಿದಂತೆ ವಿವಿಧೆಡೆ ರಸ್ತೆ ಬದಿಗಳಲ್ಲಿ ಬಿಸಿಲಿನಲ್ಲಿ ಕುಳಿತು ಹಣ್ಣು, ಹೂ, ತರಕಾರಿ, ನಿಂಬೆಹಣ್ಣು ಸೇರಿ ಇತರೆ ವಸ್ತುಗಳನ್ನು ವ್ಯಾಪಾರ ಮಾಡುವ ರಸ್ತೆ ಬದಿಯ ವ್ಯಾಪಾರಿಗಳಿಗೆ ಬಿಸಿಲಿನಿಂದ ರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಕ್ಲಬ್ ವತಿಯಿಂದ ಅಂದಾಜು 40 ಸಾವಿರ ವೆಚ್ಚದಲ್ಲಿ 20 ಕ್ಕೂ ಅಧಿಕ ಛತ್ರಗಳನ್ನು ವಿತರಣೆ ಮಾಡುವ ಮೂಲಕ ವ್ಯಾಪಾರಿಗಳಿಗೆ ನೆರವಾಗಿದ್ದೇವೆ ಎಂದರು.