ಕನ್ನಡಪ್ರಭ ವಾರ್ತೆ, ಮಂಡ್ಯ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಅವರು ಶೂ ವಿತರಿಸಿ ಮಾತನಾಡಿ, ತ್ರಿವರ್ಣ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿಯವರಾದ ಪಿ.ಗೋಪಾಲ್ ಹಾಗೂ ಟ್ರಸ್ಟಿ ಮೋಹನ್ಕುಮಾರ್ ಅವರ ದಾನಗುಣ ಮೆಚ್ಚುವಂತದ್ದು, ಉಳ್ಳವರೆಲ್ಲರಿಗೂ ಬಡವರಿಗೆ ಸಹಾಯ ಮಾಡುವ ಗುಣ ಇರುವುದಿಲ್ಲ, ಇಂತಹ ಗುಣವಂತರಿಗೆ ಸದಾ ಒಳ್ಳೆಯದಾಗಲಿ ಎಂದು ಆರೈಸಿದರು.
ಇಂತಹ ಅಲೆಮಾರಿ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು, ಇಬ್ಬರು ಹೆಣ್ಣು ಮಕ್ಕಳು ಉತ್ತಮ ಅಂಕ ಪಡೆದು ಮೊದಲ ಪ್ರಯತ್ನದಲ್ಲೆ ಎಸ್ಸೆಸ್ಸೆಲ್ಸಿ ಪಾಸಾಗಿರೋದು ಒಳ್ಳೆಯ ಬೆಳವಣಿಗೆ ಎಲ್ಲಾ ಮಕ್ಕಳೂ ಹೀಗೇ ಓದಿ ಸಾಧನೆ ಮಾಡಬೇಕೆಂದು ಆಶಯ ವ್ಯಕ್ತಪಡಿಸಿದರು.ಆಂಗ್ಲ ಉಪನ್ಯಾಸಕ ಕಲ್ಲಹಳ್ಳಿ ಕೆ.ಸಿ ಲೋಕೇಶ್ ಮಾತನಾಡಿ, ಕರೋನಾ ಲಾಕ್ಡೌನ್ ಆದಾಗ ಪರಸ್ಪರ ಸಂಸ್ಥೆ ಸೇರಿದಂತೆ ಇತರೆ ಮೂರ್ನಾಲ್ಕು ಸಂಸ್ಥೆಗಳು ಇವರನ್ನು ಮೂರು ತಿಂಗಳ ಕಾಲ ಪುನರ್ವಸಿ ಕಲ್ಪಿಸಿ ಸಲಹಿದರು, ನಂತರ ಸರ್ಕಾರಿ ಭೂಮಿಯಲ್ಲಿ ತಂದು ಇರಿಸಿ, ಎಲ್ಲಾ ರೀತಿಯ ಸಹಾಯ ಮಾಡಿ ಇಲ್ಲಿ ನೆಲೆಸುವಂತೆ ಮಾಡಿದರು, ಹಂತ ಹಂತವಾಗಿ ಇವರ ಬೆಳವಣಿಗೆ ಪರಿವರ್ತನೆ ಆಗುತ್ತಿದೆ ಎಂದರು.
ಪರಸ್ಪರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ, ಪತ್ರಕರ್ತ ದೇವರಾಜ್ ಕೊಪ್ಪ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ವೇದಿಕೆಯಲ್ಲಿ ಇಬ್ಬನಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಶೃತಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಆಶ್ರಮದ ಮೇಲ್ವಿಚಾರಕಿ ಶಾಲಿನಿ ಉಪಸ್ಥಿತರಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದಿಂದ ಜೂ.೧೮ರಂದು ಬೆಳಗ್ಗೆ ೧೦.೩೦ಕ್ಕೆ ತಾಲೂಕಿನ ಹೊನ್ನಾಯ್ಕನಹಳ್ಳಿ ಗ್ರಾಮದ ನಿರಂಜನ್ ಅವರ ಹೊಲದಲ್ಲಿ ನೈಸರ್ಗಿಕ ಸಾವಯವ ಕೃಷಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಅಶೋಕ ಎಸ್.ಡಿ.ಜಯರಾಮ್ ತಿಳಿಸಿದರು.
ಕಾರ್ಯಾಗಾರದಲ್ಲಿ ನೈಸರ್ಗಿಕ ಕೃಷಿ ಉತ್ಪನ್ನಗಳ ೧೦ ಸ್ಟಾಲ್ಗಳನ್ನು ತೆರೆಯಲಾಗುವುದು. ಅಲ್ಲಿ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ೫೦೦ಕ್ಕೂ ಹೆಚ್ಚು ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಆರ್.ಅಶೋಕ್ಕುಮಾರ್, ಮಾಜಿ ಜಿಲ್ಲಾಧ್ಯಕ್ಷ ಜೋಗಿಗೌಡ, ಮಹೇಂದ್ರ, ಸಿ.ಎಂ.ಜವರೇಗೌಡ, ಸಿದ್ದರಾಜು ಇದ್ದರು.