ಕನ್ನಡಪ್ರಭ ವಾರ್ತೆ ಪಾವಗಡ
ಪಟ್ಟಣದ ಎಪಿಎಂಸಿ ಮಾರುಕಟ್ಟೆ ಗೋದಾಮಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಿಯಾಯಿತಿ ದರದ ಶೇಂಗಾ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಸಕ್ತ ಸಾಲಿಗೆ ರೈತರಿಗೆ ಸಮಯಕ್ಕೆ ಸರಿಯಾಗಿ ಬಿತ್ತನೆ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರದ ರಿಯಾಯಿತಿ ದರದಲ್ಲಿ ಶೇಂಗಾ ಇತರೆ ದ್ವಿದಳ ಧಾನ್ಯಗಳ ಬೀಜಗಳನ್ನು ವಿತರಿಸಲಾಗುತ್ತಿದ್ದು, ಸರ್ಕಾರ ಜಾರಿಪಡಿಸಿದ್ದ ಕ್ವಿಂಟಾಲ್ ದರದಲ್ಲಿ ಪಹಣಿ ಹಾಗೂ ಇತರೆ ಅಗತ್ಯ ದಾಖಲೆ ಸಲ್ಲಿಸಿ ಬಿತ್ತನೆ ಬೀಜ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವ ಸಲುವಾಗಿ ತಾಲೂಕು ಕೃಷಿ ಇಲಾಖೆಯಿಂದ ಪ್ರಸಕ್ತ ರಿಯಾಯಿತಿ ದರದಲ್ಲಿ ಶೇಂಗಾ ಹಾಗೂ ತೊಗರಿ, ಅಲಸಂದೆ ಮತ್ತು ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ರೈತರಿಗೆ ಕರೆ ನೀಡಿ ಶುಭ ಹಾರೈಸಿದರು.
ಇದೇ ವೇಳೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಜಯ್ ಕುಮಾರ್,ಪುರಸಭಾ ಮಾಜಿ ಅಧ್ಯಕ್ಷರಾದ ಸುದೇಶ್ ಬಾಬು, ಮುಖಂಡರಾದ ಶಂಕರ್ ರೆಡ್ಡಿ, ಚಂದ್ರಶೇಖರರೆಡ್ಡಿ ಪಿ. ಎಚ್.ರಾಜೇಶ್, ಕೆಒಎಫ್ ನಿರ್ದೇಶಕ ಎ.ಎನ್.ನಾರಾಯಣಪ್ಪ, ವಿತರಕ ಬಾಲಾಜಿ, ಕರೆಕ್ಯಾತನಹಳ್ಳಿಯ ಡಿ.ಮಂಜುನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ, ತಾಲೂಕು ಅಧ್ಯಕ್ಷ ನರಸಿಂಹರೆಡ್ಡಿ, ಕೃಷ್ಣರಾವ್, ಕಲ್ಪವೃಕ್ಷ ರವಿ, ಶಿವಮೂರ್ತಿ, ವಾಗೀಶ್ ಆರಾಧ್ಯ, ಗುತ್ತಿಗೆದಾರ ಆರ್.ಎ.ಹನುಮಂತರಾಯಪ್ಪ ಪಳವಳ್ಳಿ ಸೊಸೈಟಿ ಕಾರ್ಯದರ್ಶಿ ನಜುರುಲ್ಲ, ಹರೀಶ್ ಸೇರಿದಂತೆ ಹಲವಾರು ಮುಖಂಡರು ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.