ಶ್ರೀರಾಮ ಜನ್ಮಭೂಮಿ ಆಯೋಧ್ಯಾನಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ಶ್ರೀರಾಮ ಜನ್ಮ ತೀರ್ಥಕ್ಷೇತ್ರ ಟ್ರಸ್ಟ್ ಆಶ್ರಯದಲ್ಲಿ ಈಗಾಗಲೇ ದೇಶಾದ್ಯಂತ ಆರಂಭಿಸಿದ ಮಂತ್ರಾಕ್ಷತೆ ವಿತರಣೆ
ಕನ್ನಡಪ್ರಭ ವಾರ್ತೆ ಆಳಂದ
ಜ.22ರಂದು ಶ್ರೀರಾಮ ಜನ್ಮಭೂಮಿ ಆಯೋಧ್ಯಾನಲ್ಲಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ಶ್ರೀರಾಮ ಜನ್ಮ ತೀರ್ಥಕ್ಷೇತ್ರ ಟ್ರಸ್ಟ್ ಆಶ್ರಯದಲ್ಲಿ ಈಗಾಗಲೇ ದೇಶಾದ್ಯಂತ ಆರಂಭಿಸಿದ ಮಂತ್ರಾಕ್ಷತೆ ವಿತರಣೆ ಯಾತ್ರೆಯೂ ಬುಧವಾರ ಪಟ್ಟಣಕ್ಕೆ ಆಗಮಿಸಿ ಸಾರ್ವಜನಿಕರಿಗೆ ಅಕ್ಷತಾ ವಿತರಣೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಪಟ್ಟಣದ ಶ್ರೀರಾಮ ಮಾರುಕಟ್ಟೆಯಿಂದ ಆರಂಭಗೊಂಡ ಅಕ್ಷತೆಯ ಶೋಭಾಯಾತ್ರೆಯನ್ನ ಮುಖ್ಯ ರಸ್ತೆಯ ಮೂಲಕ ಆರ್ಯ ಸಮಾಜ ಮಂದಿರವರೆಗೆ ತೆರಳಿ ಸಾರ್ವಜನಿಕರಿಗೆ ಅಕ್ಷತಾ ವಿತರಣೆಗೆ ಚಾಲನೆ ನೀಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.