ದೇವನಹಳ್ಳಿ: ಯಾವುದೇ ದೇಶ ಮತ್ತು ರಾಜ್ಯ ಮತ್ತು ಗ್ರಾಮ ಅಭಿವೃದ್ಧಿ ಹೊಂದಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಸಮಾಜ ಸೇವಕ ಕಿಶೋರ್ ಕುಮಾರ್ ತಿಳಿಸಿದರು.
ಮಕ್ಕಳು ಶಿಕ್ಷಣ ಸಂಸ್ಕಾರ ಕಲಿತು ದೇಶದ ಆಸ್ತಿಯಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ ಕೋಟಿ ಕೋಟಿ ಆಸ್ತಿ ಮಾಡುವ ಬದಲು ಶಿಕ್ಷಣವೆಂಬ ದೊಡ್ಡ ಆಸ್ತಿ ಮಕ್ಕಳಿಗೆ ನೀಡಬೇಕು. ಅದು ಕೊನೆವರೆಗೂ ಮಕ್ಕಳನ್ನು ಕಾಯುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಯಾವುದೇ ಖಾಸಗಿ ಶಾಲೆಗಿಂತಲೂ ಕಡಿಮೆ ಇಲ್ಲದ ರೀತಿ ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ತಾಪಂ ಮಾಜಿ ಉಪಾಧ್ಯಕ್ಷ ಎಸ್.ಎಂ.ನಾರಾಯಣಸ್ವಾಮಿ, ಮುಖಂಡ ವೆಂಕಟೇಶ್ ದಾಸ್, ಕನ್ನಮಂಗಲ ಗ್ರಾಪಂ ಮಾಜಿ ಸದಸ್ಯ ಸೋಮಶೇಖರ್, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.೨೧ ದೇವನಹಳ್ಳಿ ಚಿತ್ರಸುದ್ದಿ ೦೩:
ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಮಾಜ ಸೇವಕ ಕಿಶೋರ್ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನ ಸಾಮಗ್ರಿಯನ್ನು ಸಮಾಜ ಸೇವಕ ಕಿಶೋರ್ ಕುಮಾರ್ ವಿತರಿಸಿದರು.