ಕನ್ನಡಪ್ರಭ ವಾರ್ತೆ ರಾಮದುರ್ಗ
ಗುರುವಾರ ತಾಲೂಕಿನ ಖಾನಪೇಠದಲ್ಲಿರುವ ಕಾರ್ಖಾನೆಯ ಆವರಣದಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ತಾಲೂಕಾಗಿದ್ದ ರಾಮದುರ್ಗದಲ್ಲಿ ಸಹಕಾರಿ ರಂಗದಲ್ಲಿ ಕಾರ್ಖಾನೆ ಆರಂಭಕ್ಕೆ ಷೇರು ಖರೀದಿ ಮಾಡಿರುವ ರೈತರ ಋಣ ತೀರಿಸಲು ಸಾಧ್ಯವಿಲ್ಲ. ಅವರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸಲು 12 ವರ್ಷದ ಹಿಂದೆ ಆಡಳಿತ ಮಂಡಳಿ ನಿರ್ಧಾರ ಮಾಡಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು.
ಸಹಕಾರಿ ರಂಗದಲ್ಲಿ ಸ್ಥಾಪನೆಯಾದ ಕೆಲ ಸಕ್ಕರೆ ಕಾರ್ಖಾನೆಗಳು ಷೇರುದಾರರಿಗೆ ಏನೂನೀಡುತ್ತಿಲ್ಲ. ಆದರೆ, ನಮ್ಮ ಕಾರ್ಖಾನೆ ರೈತರಿಗೆ ರಿಯಾಯತಿ ದರದಲ್ಲಿ ಸಕ್ಕರೆ ನೀಡುತ್ತಿದ್ದು, ಆ.೧೫ರವರೆಗೆ ರಜಾ ದಿನ ಹೊರತುಪಡಿಸಿ ಪ್ರತಿದಿನ ವಿತರಣೆ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ರೈತರಿಗೆ ಡಿವಿಡೆಂಡ್ ನೀಡುವ ಬದಲು ರಿಯಾಯತಿ ದರದಲ್ಲಿ ಸಕ್ಕರೆ ನೀಡಲು ಆರಂಭಿಸಿದ್ದು, ಮುಂದೆಯೂ ಕೂಡ ಸಕ್ಕರೆ ವಿತರಣೆ ಕಾರ್ಯ ಮುಂದುವರಿಯಲಿದೆ ಎಂದು ಹೇಳಿದ ಅವರು, ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿ ಒಗ್ಗಟ್ಟು ಇರುವ ಪರಿಣಾಮ ಚೆನ್ನಾಗಿ ನಡೆಯುತ್ತಿದೆ. ಇಲ್ಲದಿದ್ದರೆ ಕಾರ್ಖಾನೆ ದಿವಾಳಿಯಾಗುತ್ತಿತ್ತು. ಷೇರುದಾರರ ಸಹಕಾರ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಿದರು.