ಕನ್ನಡಪ್ರಭ ವಾರ್ತೆ ಸುರಪುರ
ನಂತರ ಮಾತನಾಡಿದ ಅವರು, ರಾಗಿ ಮಾಲ್ಟ್ನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಅಗತ್ಯ ಪೌಷ್ಟಿಕಾಂಶಗಳು ದೊರೆಯುತ್ತವೆ. ರಾಗಿ ತಿಂದವನಿಗೆ ರೋಗವಿಲ್ಲ ಎಂಬಂತೆ ರಾಗಿ ಸೇವಿಸಿದರೆ ದೈಹಿಕ ಸದೃಢವಾಗಿರಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆಎಂಎಫ್ ಸಂಸ್ಥೆ ಸಹಭಾಗಿತ್ವದಲ್ಲಿ ಆರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ದೊರೆಯಲಿ ಎಂದು ಹಾರೈಸಿದರು.
ಪ್ರಭಾರಿ ಬಿಸಿಯೂಟ ಸಹಾಯಕ ನಿರ್ದೇಶಕ ಪಂಡಿತ ನಿಂಬೂರೆ, ಬಿಆರ್ಪಿ ಖಾದರ ಪಟೇಲ್ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ಸೋಮರೆಡ್ಡಿ ಮಂಗಿಹಾಳ ಅಧ್ಯಕ್ಷತೆ ವಹಿಸಿದ್ದರು. ಇಸಿಓ ಸಣ್ಣ ಹಣಮಂತ, ಶಿವುಕುಮಾರ ಹಿರೇಮಠಸಿ. ಎಸ್ಡಿಎಂಸಿ ಅಧ್ಯಕ್ಷ ಆರ್.ಪಿ.ಸಜ್ಜನ್ ಕುಮಾರ ಸೇರಿ ಇತರರಿದ್ದರು.