ಕನ್ನಡಪ್ರಭ ವಾರ್ತೆ ಮೈಸೂರು
ನಗರಕ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಂಗಳವಾರ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ವಜ್ಞನ ವಚನಗಳು ತ್ರಿಪದಿಗಳೆಂದೇ ಪ್ರಸಿದ್ಧಿಯಾಗಿದೆ. ಹಲವಾರು ಅಂಶಗಳನ್ನು ಕುರಿತು ವಚನಗಳನ್ನು ರಚಿಸಿದ ಒಬ್ಬ ಮೇಧಾವಿ ವಚನಕಾರರಾಗಿದ್ದಾರೆ. ಸಮಾಜದಲ್ಲಿನ ಅಂಕು ಡೊಂಕುಗಳನ್ನು, ಮೂಢನಂಬಿಕೆಗಳನ್ನು ಹಳೆಯ ಸಂಪ್ರಂದಾಯಗಳು ಮತ್ತು ಕಟ್ಟಾಚಾರ ಕುರಿತು ತನ್ನ ವಚನಗಳಲ್ಲಿ ಪ್ರಸ್ತುತಪಡಿಸಿದ್ದಾರೆ ಎಂದರು.
ಮುಂದಿನ ಪೀಳಿಗೆಗೆ ಮಾದರಿಯಾಗುವ ನಿಟ್ಟಿನಲ್ಲಿ ಜಯಂತಿಗಳನ್ನು ನಾವು ಆಚರಿಸಬೇಕು. 12ನೇ ಶತಮಾನದಲ್ಲಿ ಕನ್ನಡದ ವಚನ ಸಾಹಿತ್ಯ ಕಬ್ಬಿಣದ ಕಡಲೆಯಾಗಿತ್ತು, ನಂತರದ ಕಾಲಮಾನದಲ್ಲಿ ಸರ್ವಜ್ಞನ ವಚನಗಳು ಸುಲಭ ರೀತಿಯಲ್ಲಿ ಜನ ಸಾಮಾನ್ಯರಿಗೂ ಅರ್ಥವಾಗುವಂತಹ ರೀತಿಯಲ್ಲಿ ತ್ರಿಪದಿಗಳನ್ನು ರಚಿಸಿದ್ದಾರೆ. ಸರ್ವಜ್ಞನ ವಚನಗಳಲ್ಲಿರುವ ಆದರ್ಶ ತತ್ವಗಳು, ಸಮಾಜದಲ್ಲಿರುವ ಅನಾಚಾರಗಳನ್ನು ತಿದ್ದುವ ಕೆಲಸ ಮಾಡುತ್ತಿದೆ. ಉತ್ತಮ ಸಮಾಜವನ್ನು ಬಲಪಡಿಸುವಂತಹ ಸಾರಾಂಶಗಳು ಇವರ ತ್ರಿಪದಿಗಳಲ್ಲಿ ಇದೆ ಎಂದು ಅವರು ಹೇಳಿದರು.ಕೆ.ಆರ್. ನಗರ ತಾಲೂಕು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರಭಾಕರ್ ಹೆಗ್ಗಂದೂರು ಮಾತನಾಡಿ, ಸರ್ವಜ್ಞರು ಆಡುಭಾಷೆಯಲ್ಲಿ ತ್ರಿಪದಿಗಳನ್ನು ರಚಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಸಮಾಜ ಸುಧಾರಕ, ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆ ನೀಡಿದ ಶ್ರೇಷ್ಠ ವಚನಕಾರ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಕುಂಬಾರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಆರ್. ಸೋಮಶೇಖರ್ ಮಹಿಳಾ ಸಂಘದ ಅಧ್ಯಕ್ಷೆ ರೇಣುಕಾಂಬ, ಸರ್ವಜ್ಞ ಸೇವಾ ಸಮಿತಿನ ಅಧ್ಯಕ್ಷ ವಾಸು ಮೊದಲಾದವರು ಇದ್ದರು.
- ಕೆ.ಎಂ. ಗಾಯತ್ರಿ, ಜಿಪಂ ಸಿಇಒ