ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿಗೆ ಜಿಲ್ಲಾಡಳಿತ ಗೌರವಾರ್ಪಣೆ

KannadaprabhaNewsNetwork |  
Published : Aug 10, 2025, 01:37 AM IST
ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿಗೆ ಜಿಲ್ಲಾಡಳಿತ ಗೌರವಾರ್ಪಣೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಕ್ವಿಟ್ ಇಂಡಿಯಾ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು. ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ ಕಿಣಿ ಅವರ ಮನೆಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕ್ವಿಟ್ ಇಂಡಿಯಾ ದಿನಾಚರಣೆ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು. ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ ಕಿಣಿ ಅವರ ಮನೆಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.

ವಿಠಲ ಕಿಣಿ ಅವರೊಂದಿಗೆ ಸಮಾಲೋಚಿಸಿದ ಅವರು, ಸ್ವಾತಂತ್ರ್ಯ ಹೋರಾಟದ ಮಾಹಿತಿ ಪಡೆದರು.

ಈ ಸಂದರ್ಭ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ತಹಸೀಲ್ದಾರ್ ರಮೇಶ್ ಬಾಬು, ಕಸಬಾ ಕಂದಾಯ ನಿರೀಕ್ಷಕ ಚೇತನ್ ಮತ್ತಿತರರು ಇದ್ದರು.

ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಟ್ಠಲ ಕಿಣಿ‌ ಅವರು ಜನಿಸಿದ್ದು 1929 ಏಪ್ರಿಲ್‌ 17ರಂದು. 1942ರಲ್ಲಿ ಭಾರತ ಛೋಡೊ ಚಳವಳಿ ದೇಶಾದ್ಯಂತ ನಡೆದಾಗ ಕಾಸರಗೋಡಿನಲ್ಲಿ ವಿದ್ಯಾರ್ಥಿಗಳ ಜತೆಗೂಡಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

1954ರಲ್ಲಿ ಸರ್ವ ಪಕ್ಷ ಗೋವಾ ವಿಮೋಚನಾ ಸಮಿತಿಯನ್ನು ಪ್ರಾರಂಭಿಸಿ ಅದರ ಕೋಶಾಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದ ಕಿಣಿ ಅವರು, 1955ರ ಆ.5ರಂದು ಗೋವಾ ವಿಮೋಚನೆಗಾಗಿ ಉಡುಪಿಯ ಮಾಜಿ ಪುರಸಭಾಧ್ಯಕ್ಷರು, ಸ್ವಾತಂತ್ರ್ಯ ಹೋರಾಟಗಾರರೂ ಆದ ದಿ. ಯು.ಎಸ್. ನಾಯಕರ ನೇತೃತ್ವದಲ್ಲಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಗೋವಾ ಪ್ರವೇಶ ಮಾಡಿ ಬಂಧನಕ್ಕೆ ಒಳಗಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಶ್ನೆಪತ್ರಿಕೆ ಲೀಕ್‌ ಆದರೆ ಪ್ರಿನ್ಸಿಪಾಲ್‌ ವಿರುದ್ಧ ಕೇಸ್‌
ಮಹಾ ಜಿಪಂ ಎಲೆಕ್ಷನ್‌ಗೆ ಮೈಸೂರು ಇಂಕ್‌ ಬಳಕೆ