ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ವಿಶ್ವಯೋಗ ದಿನಕ್ಕೆ ಜಿಲ್ಲಾಡಳಿತ ಸಿದ್ಧತೆ

KannadaprabhaNewsNetwork | Updated : Jun 14 2025, 03:54 AM IST

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ವಿಶ್ವ ಯೋಗ ದಿನವನ್ನು ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನದ ಪೂರ್ವಬಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಜೂ.೨೧ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೧ನೇ ವಿಶ್ವ ಯೋಗ ದಿನಾಚರಣೆ ಯೋಗ ಸಂಗಮ, ಯೋಗ ಧನುಷ, ಹಸಿರು ಯೋಗ (ಹರಿತ್ ಯೋಗ) ಹಾಗೂ ಯೋಗ ಪಾರ್ಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿ ವಿಶ್ವ ಯೋಗ ದಿನವನ್ನು ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನದ ಪೂರ್ವಬಾವಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಜೂ.೨೧ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೧ನೇ ವಿಶ್ವ ಯೋಗ ದಿನಾಚರಣೆ ಯೋಗ ಸಂಗಮ, ಯೋಗ ಧನು?, ಹಸಿರು ಯೋಗ (ಹರಿತ್ ಯೋಗ) ಹಾಗೂ ಯೋಗ ಪಾರ್ಕ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಿಂದಗಿ ತಾಲೂಕಿನ ಕೆರೂಟಗಿಯ ಆಯುಷ್ಮಾನ ಆರೋಗ್ಯ ಮಂದಿರದಲ್ಲಿ ಯೋಗ ಯೋಗ ಸಂಗಮ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯಶಸ್ವಿ ಯೋಗ ದಿನಾಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತಾ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಅಂಬ್ಯುಲೆನ್ಸ್ ವ್ಯವಸ್ಥೆ, ಯೋಗ ತರಬೇತಿದಾರರ ವ್ಯವಸ್ಥೆ, ಆಯುಷ್ ಪದ್ಧತಿ ತಿಳುವಳಿಕೆಗೆ ಓರ್ವ ವೈದ್ಯರ ನಿಯೋಜನೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ವಾಯ್-ಬ್ರೇಕ್ ಯೋಗ ಆಪ್ ಸಹಾಯದಿಂದ ವಿವಿಧ ಬಗೆಯ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ, ಖೈದಿಗಳಿಗೆ, ವಾಣಿಜ್ಯ ಮಳಿಗೆ ಸಿಬ್ಬಂದಿಗೆ ಗ್ರಾಮ ಸಭೆ, ನ್ಯಾಯಾಲಯಗಳು, ಸರ್ಕಾರಿ ಕಚೇರಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳ ಸಿಬ್ಬಂದಿಗೆ ೧೦ರಿಂದ ೧೫ ನಿಮಿಷಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಸಿರು ಯೋಗ ಕಾರ್ಯಕ್ರಮಗಳಲ್ಲಿ ಎನ್.ಎಸ್.ಎಸ್, ಸ್ಕೌಟ್‌ ಆಂಡ್ ಗೈಡ್ಸ್, ಎನ್.ಸಿ.ಸಿ, ಅರಣ್ಯ ಇಲಾಖೆ, ಸರ್ಕಾರಿ ಕಚೇರಿಗಳು, ಸರ್ಕಾರೇತರ ಕಚೇರಿಗಳು, ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಯೋಗಭ್ಯಾಸ ನಂತರ ಶ್ರಮದಾನ, ಸ್ವಚ್ಛತಾ ಅಭಿಯಾನ ಹಾಗೂ ಸಸಿ ನಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಆಯೋಜಿಸಬೇಕು. ಜೂ.21 ಬೆಳಿಗ್ಗೆ ೯ ಗಂಟೆಗೆ ಆಯುಷ್ಯ ಇಲಾಖೆಯಿಂದ ಯೋಗ ಶಿಕ್ಷಕರನ್ನು ಕಳುಹಿಸಿ ೨೦ ನಿಮಿಷದ ಯೋಗಭ್ಯಾಸ ಆಯೋಜಿಸುವುದು, ಸ್ಕೌಟ್‌ ಆಂಡ್ ಗೈಡ್ಸ್, ಯೋಗ ಶಿಕ್ಷಕ ಹಾಗೂ ಆಯುಷ್ಯ ಪದ್ಧತಿಯ ತಿಳುವಳಿಕೆಗಾಗಿ ಒಬ್ಬ ವೈದ್ಯರನ್ನು ನಿಯೋಜಿಸಿ ೨೦ ನಿಮಿಷಗಳ ಕಾಲ ಯೋಗ ಆಚರಿಸುವುದು, ಕಾರಾಗೃಹ ಅಧೀಕ್ಷಕರು, ಜಿಲ್ಲಾ ಬಂದಿಖಾನೆಯಲ್ಲಿ ಯೋಗ ಧನುಷ ಕಾರ್ಯಕ್ರಮದಲ್ಲಿ ಸಿಬ್ಬಂದಿ, ಖೈದಿಗಳಿಗ ವಾಯ್ ಬ್ರೀಕ್ ಯೋಗ ಆಪ್ ಸಹಾಯದಿಂದ ೩೦ ನಿಮಿಷಗಳ ಯೋಗ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಯೋಗ ದಿನ ನಿಗದಿತ ಕಾರ್ಯಕ್ರಮಗಳನ್ನು ನಿಗದಿತ ಅವಧಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಲ್ಪೋಪಹಾರ, ಶುದ್ಧ ಕುಡಿಯುವ ನೀರು, ಅಂಬ್ಯುಲೆನ್ಸ್‌, ವ್ಯವಸ್ಥೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಆಯುಷ್ ಇಲಾಖೆ ಡಾ.ವಿದ್ಯಾವತಿ ಅಥಣಿ, ಡಾ.ವಿ.ಬಿ.ದೇಸಾಯಿ, ಡಾ.ಬಸವರಾಜ ಒಗದುರ್ಗಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ಮಹಾವಿದ್ಯಾಲಯದ ಬಿ.ಕೆ.ಶೈಲಕಾ, ಡಾ.ರಿಷಿಕೇಶ ಪಾಟೀಲ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.