ಕುಕ್ಕರಹಳ್ಳಿಕೆರೆಗೆ ಕಾಯಕಲ್ಪ- ಡಿಪಿಆರ್ ಸಿದ್ಧಪಡಿಸಿ: ಡಾ.ಕೆ.ವಿ. ರಾಜೇಂದ್ರ

KannadaprabhaNewsNetwork |  
Published : May 21, 2024, 12:46 AM ISTUpdated : May 21, 2024, 02:16 PM IST
4 | Kannada Prabha

ಸಾರಾಂಶ

ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕುಕ್ಕರಹಳ್ಳಿಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಕುಕ್ಕರಳ್ಳಿಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು

 ಮೈಸೂರು :  ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಂಟ್ಯಾಕ್) ಸಂಸ್ಥೆಗೆ ವಹಿಸಿದ್ದು, ಜೂನ್ ಅಂತ್ಯದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕುಕ್ಕರಹಳ್ಳಿಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಕುಕ್ಕರಳ್ಳಿಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು.

ಕುಕ್ಕರಹಳ್ಳಿಕೆರೆಯ ಸುತ್ತಲು ಇರುವ ಅನಧಿಕೃತ ಒಳ ಚರಂಡಿಗಳನ್ನು ಮುಚ್ಚಿಸಿ, ಅಲ್ಲಿಂದ ಕೆರೆ ನೀರಿಗೆ ಬರುತ್ತಿದ್ದಂತಹ ಕೊಳಚೆ ನೀರನ್ನು ತಡೆಗಟ್ಟಬೇಕು. ಶುದ್ಧ ನೀರನ್ನು ಕಾಪಾಡಿಕೊಳ್ಳಬೇಕು. ಕೆರೆಯ ವ್ಯಾಪ್ತಿಯಲ್ಲಿ ಕೆಲವೊಂದು ಕಡೆ ಕಸದ ರಾಶಿ ಕಂಡು ಬರುತ್ತಿದ್ದು, ತಕ್ಷಣವೇ ಅದನ್ನು ತೆರವುಗೊಳಿಸಬೇಕು. ಆ ಸ್ಥಳಗಳಲ್ಲಿ ಪಾರ್ಕ್, ಕೂರಲು ಹಾಸನದ ವ್ಯವಸ್ಥೆ ಇತ್ಯಾದಿ ಉಪಯುಕ್ತ ಕೆಲಸಕ್ಕೆ ಬಳಸಿ ಸಾರ್ವಜನಿಕರಿಗೆ ಸಹಾಯವಾಗುವಂತೆ ಮಾರ್ಪಡಿಸಬೇಕು ಎಂದು ಅವರು ತಿಳಿಸಿದರು.

ಸುತ್ತಮುತ್ತಲಿನ ಶಬ್ದ ಮಾಲಿನ್ಯದಿಂದ ಕೆರೆಯ ಒಳಗಿರುವ ಪ್ರಾಣಿ- ಪಕ್ಷಿಗಳಿಗೆ ತೊಂದರೆ ಆಗುತ್ತಿದ್ದು, ಅದನ್ನು ತಡೆಯಲು ಸಾರ್ವಜನಿಕರಿಗೆ ಸೂಚನಾ ಫಲಕಗಳ ಮೂಲಕ ಮಾಹಿತಿ ನೀಡಿ ಶಬ್ದವನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಶುದ್ಧವಾದ ನೀರು, ಗಾಳಿ ಸಿಗುವಂತಹ ವಾತಾವರಣವನ್ನು ನಿರ್ಮಿಸಬೇಕು. ಕೆರೆಯೊಳಗೆ ಇರುವಂತಹ ಬೇಡದ ದೋಣಿಗಳನ್ನು ತೆರವುಗೊಳಿಸಬೇಕು. ಸಾರ್ವಜನಿಕರು ಕೆರೆಯೊಳಗೆ ಹೋಗದಂತೆ ನಿಗಾ ವಹಿಸಬೇಕು ಎಂದರು.

ಪರಿಣಿತರಿಂದ ಕುಕ್ಕರಹಳ್ಳಿಕೆರೆ ಅಭಿವೃದ್ಧಿ ಸಂಬಂಧ ಯೋಜನೆ ಅನುಷ್ಠಾನಕ್ಕೆ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಸಲಹೆ ಸ್ವೀಕರಿಸಿ, ಈಗಾಗಲೇ ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಚರ್ಚಿಸಿದರು.

ನಗರ ಪಾಲಿಕೆಯ ಆಯುಕ್ತೆ ಡಾ.ಎನ್.ಎನ್. ಮಧು, ಎಂಡಿಎ ಆಯುಕ್ತ ದಿನೇಶ್ ಕುಮಾರ್, ಇಂಟ್ಯಾಕ್ ಸಂಸ್ಥೆಯ ಅಧಿಕಾರಿಗಳು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಮೈಸೂರು ಪರಂಪರೆ ಸಮಿತಿಯ ಸದಸ್ಯರು, ಮೈಸೂರು ವಿವಿ ಕುಕ್ಕರಹಳ್ಳಿ ಕೆರೆ ಸಮಿತಿಯ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ