ಕನ್ನಡಪ್ರಭ ವಾರ್ತೆ ಮಳವಳ್ಳಿ
ಸೋಮವಾರ ಸಂಜೆ ಗಗನಚುಕ್ಕಿ ಜಲಪಾತ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಹಾಗೂ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಸ್ಥಳೀಯವಾಗಿ ಕೈಗೊಂಡಿರುವ ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗಗನಚುಕ್ಕಿ ಹಾಗೂ ಭರಚುಕ್ಕಿ ಎರಡು ಜಲಪಾತಗಳಿಂದ ನೊರೆ ಹಾಲಿನಂತೆ ದುಮ್ಮಿಕ್ಕಿ ಹರಿಯುವ ನೀರಿನ ದೃಶ್ಯವನ್ನು ಕೆಲಕಾಲ ವೀಕ್ಷಿಸಿದ ಡೀಸಿ ಡಾ.ಕುಮಾರ ಮಾತನಾಡಿ, ಪ್ರವಾಸಿಗರು ನದಿ ಬಳಿ ತೆರಳದಂತೆ ಬಿಗಿ ಭದ್ರತೆ ಕೈಗೊಳ್ಳಬೇಕು. ಹೋಂ ಗಾರ್ಡ್ ಗಳು ಸ್ಥಳದಲ್ಲೇ ಇದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಇದೇ ವೇಳೆ ಕೆಆರ್ ಎಸ್ ಮತ್ತು ಕಬಿನಿ ಜಲಾಶಯಗಳಿಂದ ಸುಮಾರು 60 ಸಾವಿರಕ್ಕೂ ಹೆಚ್ಚಿನ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಟ್ಟಿರುವುದರಿಂದ ಶಿವನಸಮುದ್ರದ ಗಗನಚುಕ್ಕಿ, ಭರಚುಕ್ಕಿ ಜಲಪಾತಗಳೆರಡು ಗಗನದಿಂದ ನೊರೆಹಾಲಿನಂತೆ ಭೋರ್ಗೆರೆಯುತ್ತಾ ದುಮ್ಮಿಕ್ಕಿ ಹರಿಯುವ ರಮಣೀಯ ದೃಶ್ಯ ನೋಡುಗರ ಗಮನ ಸೆಳೆಯಿತು.
ಕೆಆರ್ ಎಸ್ ನೀರಿನ ಮಟ್ಟಗರಿಷ್ಠ ಮಟ್ಟ - 124.80 ಅಡಿ
ಇಂದಿನ ಮಟ್ಟ – 122.75 ಅಡಿ
ಒಳ ಹರಿವು – 46,843 ಕ್ಯುಸೆಕ್ಹೊರ ಹರಿವು – 51,509 ಕ್ಯುಸೆಕ್
ನೀರಿನ ಸಂಗ್ರಹ – 46.634 ಟಿಎಂಸಿ