ಕಾಲಮಿತಿಯಲ್ಲಿ ಅನುದಾನ ಬಳಕೆ ಮಾಡಲು ಜಿಲ್ಲಾಧಿಕಾರಿ ಸೂಚನೆ

KannadaprabhaNewsNetwork |  
Published : Nov 17, 2023, 06:45 PM IST
ಕ್ಯಾಪ್ಷನಃ16ಕೆಡಿವಿಜಿ36ಃದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಅಧ್ಯಕ್ಷತೆಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚನೆ ನೀಡಿದರು.

ಎಸ್.ಸಿ.ಪಿ, ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ ಡಾ.ಎಂ.ವಿ.ವೆಂಕಟೇಶ್ ತಾಕೀತುಕನ್ನಡಪ್ರಭ ವಾರ್ತೆ ದಾವಣಗೆರೆ

ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ಬಳಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಲವು ಇಲಾಖೆಯವರು ವರ್ಷವಿಡಿ ಅನುದಾನ ಖರ್ಚು ಮಾಡದಿದ್ದರೂ ಮಾರ್ಚ್ ನಲ್ಲಿ ಶೇ 100 ರಷ್ಟು ಸಾಧನೆ ಮಾಡುತ್ತಾರೆ. ಆದರೆ ಇದಕ್ಕೆ ಅವಕಾಶ ನೀಡದೆ, ಕೊನೆಯಲ್ಲಿ ಖರ್ಚು ಮಾಡುವ ಇಲಾಖೆ ಅಧಿಕಾರಿಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ. ನೈಜ ಕಾರಣಗಳಿಲ್ಲದಿದ್ದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈಗಾಗಲೇ ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆ ಅನುಮೋದನೆಯಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ವರ್ಷಾಂತ್ಯದಲ್ಲಿ ಚುನಾವಣೆ ಬರುವುದರಿಂದ ಟೆಂಡರ್ ಕರೆದು ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು.

ಬೆಸ್ಕಾಂ ಶೂನ್ಯ ಪ್ರಗತಿ: ಆರೋಗ್ಯ ಇಲಾಖೆ ಶೇ 87, ಆಯುಷ್ ಶೇ 35, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶೇ 64, ಜಲಸಂಪನ್ಮೂಲ ಇಲಾಖೆ ಶೇ 46 ಸಾಧಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಗೆ ರೂ.6 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ್ದು ಅನುದಾನ ಬರಬೇಕಿದೆ ಎಂದಾಗ ನೀರಾವರಿ ಸೌಲಭ್ಯದ ಜೊತೆಗೆ ಅವರ ಜಮೀನುಗಳಿಗೆ ಅನುಕೂಲ ವಾಗುವಂತೆ ಸಣ್ಣ ಸಣ್ಣ ಕೆರೆ, ಚೆಕ್ ಡ್ಯಾಂ ನಿರ್ಮಾಣವನ್ನು ಜಲಸಂಪನ್ಮೂಲ ಇಲಾಖೆಯವರು ಮುಂದಾಗಬೇಕೆಂದರು. ನೀರಾವರಿ ಕೊನೆ ಭಾಗದ ಅನೇಕ ರೈತರು ನೀರು ತಲುಪುತ್ತಿಲ್ಲ ಎಂದು ಮನವಿ ಮಾಡಿದ್ದಾರೆ.

ಖಾತರಿಯಡಿ ಕಾಲುವೆ ಸ್ವಚ್ಛತೆ: ಜಿಲ್ಲೆಯಲ್ಲಿ ಉದ್ಯೋಗ ಖಾತರಿಯಡಿ ವಾರ್ಷಿಕ 35 ಲಕ್ಷ ಮಾನವ ದಿನಗಳ ಗುರಿ ಇದ್ದು ಇದನ್ನು ಇನ್ನೂ ಹೆಚ್ಚಿಸುವ ಮೂಲಕ ಕಾಲುವೆ ಸ್ವಚ್ಛ ಮಾಡಲು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಪರಿಷ್ಕರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿ.ಪಂ. ಯೋಜನಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಎಲ್ಲಾ ಇಲಾಖೆ ಎಸ್.ಸಿ.ಪಿ.ಯಿಂದ ಶೇ 72 ಮತ್ತು ಟಿ.ಎಸ್.ಪಿ.ಯಲ್ಲಿ ಶೇಕಡ 77 ಸೇರಿದಂತೆ ಜಿಲ್ಲೆಯಲ್ಲಿ ಸರಾಸರಿ ಶೇಕಡ 74.50 ರಷ್ಟು ಪ್ರಗತಿ ದಾಖಲಾಗಿದೆ. ಇದನ್ನು ಬರುವ ಡಿಸೆಂಬರ್ ವೇಳೆಗೆ ಶೇಕಡ 80 ಕ್ಕಿಂತಲೂ ಹೆಚ್ಚು ಸಾಧನೆ ಆಗಿರಬೇಕು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಕೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ
ಶಕ್ತಿ ಯೋಜನೆ ಫಲಾನುಭವಿ ಸ್ತ್ರೀಯರಿಗೆ ಸ್ಮಾರ್ಟ್‌ಕಾರ್ಡ್‌