ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

KannadaprabhaNewsNetwork |  
Published : Jan 22, 2026, 03:00 AM IST
 | Kannada Prabha

ಸಾರಾಂಶ

ನಗರದ ಸ್ಟೀವರ್ಟ್ ಹಿಲ್ ಬಳಿ ಇರುವ ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಸ್ಟೀವರ್ಟ್ ಹಿಲ್ ಬಳಿ ಇರುವ ಕುಡಿಯುವ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಶುದ್ಧ ಕುಡಿಯುವ ನೀರು ಶುದ್ಧೀಕರಣ ಪ್ರಕ್ರಿಯೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿದರು. ಕುಡಿಯುವ ನೀರು ಸಂಬಂಧಿಸಿದಂತೆ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಪರಿಶೀಲಿಸಿದರು.

ಹಾಗೆಯೇ ಸ್ಟೀವರ್ಟ್ ಹಿಲ್ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧಿಸಿದಂತೆ ಆದಷ್ಟು ಬೇಗ ನಗರಸಭೆ ವ್ಯಾಪ್ತಿಗೆ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಎಂಜಿನಿಯರ್‌ಗಳಾದ ಸತೀಶ್, ಪ್ರಸನ್ನ ಇತರರು ಕುಡಿಯುವ ನೀರು ಶುದ್ಧೀಕರಣ ಘಟಕದಲ್ಲಿನ ಕಾರ್ಯಚಟುವಟಿಕೆ ಹಾಗೂ ಕಸ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾಟೆ ಸ್ವಯಂ ರಕ್ಷಣೆಗೆ ಆಗತ್ಯ
ಕಾಳಸಂತೆಯಲ್ಲಿ ಸಿಲಿಂಡರ್‌ ಮಾರಾಟ: ಕ್ರಮಕ್ಕೆ ಆಗ್ರಹ