ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕೆಎಫ್ಡಿ ಮತ್ತು ಡೆಂಘೀ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಮೇಯಲು ಹೋದ ಹಸು-ಎಮ್ಮೆಗಳ ಮೈಮೇಲೆ ಉಣ್ಣಿಗಳು ಅಂಟಿಕೊಂಡು ಮನೆ-ಕೊಟ್ಟಿಗೆ ಸೇರಿಸುವ ಸಾಧ್ಯತೆ ಇರುವುದರಿಂದ ಕೆಎಫ್ಡಿ ಉಣ್ಣೆಗಳು ದನ ಮತ್ತು ಎಮ್ಮೆಗಳ ಮೂಲಕ ಮನೆಗಳಿಗೆ ತಲುಪುವುದನ್ನು ತಪ್ಪಿಸಲು ಜಾನುವಾರುಗಳ ಮೈಮೇಲೆ ನಿವಾರಕಗಳ ಲೇಪನ ಮತ್ತು ಲಸಿಕೆ ನೀಡುವ ಮೂಲಕ ಉಣ್ಣಿ ನಿಯಂತ್ರಣ ಮಾಡಬೇಕು ಎಂದು ತಿಳಿಸಿದರು.
ಮಳೆ ಕಡಿಮೆ ಆದ ಮೇಲೆ ಡೆಂಘೀ ಹೆಚ್ಚುವ ಸಂಭವ ಇದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಡೆಂಘೀ ಲಕ್ಷಣಗಳಿರುವವರನ್ನು ಫಿವರ್ ಕ್ಲಿನಿಕ್ಗೆ ಕರೆ ತರಬೇಕು. ಹಾಟ್ಸ್ಟಾಪ್ ಪ್ರದೇಶಗಳಲ್ಲಿ ಸೊಳ್ಳೆ ನಿವಾರಕಗಳನ್ನು ನೀಡಲು ಕ್ರಮ ವಹಿಸಬೇಕು. ಪ್ರತಿ ವಾರ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯ ಕರ್ತರ ಮೂಲಕ ಮನೆ ಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಬೇಕು. ನಗರ ಭಾಗದಲ್ಲಿ ಆಶಾ, ಅಂಗನವಾಡಿ ಕೊರತೆ ಇರುವ ಕಾರಣ ನರ್ಸಿಂಗ್ ವಿದ್ಯಾರ್ಥಿ ಗಳನ್ನು ನಿಯೋಜಿಸಬೇಕು ಎಂದರು.ಮೆಡಿಕಲ್ ಕಾಲೇಜುಗಳ ಫ್ಯಾಮಿಲಿ ಅಡಾಪ್ಷನ್ ಪ್ರೊಗ್ರಾಮ್ ನ್ನು ಡೆಂಘೀ ಸಮಸ್ಯಾತ್ಮಕ ಗ್ರಾಮ / ವಾರ್ಡ್ಗಳಿಗೆ ವಿಸ್ತರಿಸುವಂತೆ ತಿಳಿಸಿದ ಅವರು ಡೆಂಘೀ ನಿಯಂತ್ರಣದಲ್ಲಿ ಸಹಕರಿಸಿದ ನರ್ಸಿಂಗ್, ಮೆಡಿಕಲ್ ವಿದ್ಯಾರ್ಥಿಗಳು ಮತ್ತು ಇತರೆ ಸ್ವಯಂ ಸೇವಕರಿಗೆ ದೃಢೀಕರಣ ಪತ್ರ ನೀಡುವಂತೆ ತಿಳಿಸಿದರು.
ಜಿ.ಪಂ ಸಿಇಓ ಎನ್.ಹೇಮಂತ್ ಮಾತನಾಡಿ, ಕೆಎಫ್ಡಿ ನಿಯಂತ್ರಣ ಮುನ್ನೆಚ್ಚರಿಕೆ ಕ್ರಮವಾಗಿ ಜಾನುವಾರುಗಳಲ್ಲಿ ಉಣ್ಣಿಗಳನ್ನು ನಿಯಂತ್ರಿಸಲು ಕೆಎಂಎಫ್ ಸಂಪರ್ಕಿಸಿ ಎಂಪಿಸಿಎಸ್ ಸೊಸೈಟಿ ಹಾಗೂ ಪಶುಪಾಲನಾ ಇಲಾಖೆಯಡಿ ನೋಂದಣಿಯಾದ ಜಾನುವಾರುಗಳ ಸಂಖ್ಯೆಯ ವರದಿ ಪಡೆಯಬೇಕು. ಜೊತೆಗೆ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಜಾನುವಾರುಗಳು ಹೊರಗಡೆ ಮೇಯುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಿಮ್ಸ್ ಕಾಲೇಜಿನ ಡಾ.ಪ್ರವೀಣ್ ಮಾತನಾಡಿ, ಪ್ರಸ್ತುತ ಕಾಲೇಜಿನ ವಿದ್ಯಾರ್ಥಿಗಳು ಫ್ಯಾಮಿಲಿ ಅಡಾಪ್ಷನ್ ಪ್ರೊಗ್ರಾಮ್ ನಲ್ಲಿ ಗ್ರಾಮಗಳಲ್ಲಿ 3 ರಿಂದ 4 ಕುಟುಂಬ ಗಳನ್ನು ಅಡಾಪ್ಟ್ ಮಾಡಿಕೊಂಡಿದ್ದು, 2 ರಿಂದ 3 ಪ್ರದೇಶಗಳಲ್ಲಿ ಸ್ಕ್ರೀನಿಂಗ್ ಶಿಬಿರಗಳನ್ನು ಮಾಡುತ್ತಿದ್ದಾರೆ. ಇಲ್ಲಿ ಡೆಂಘೀ ಕುರಿತು ಅರಿವು ಮೂಡಿಸಲಾಗುವುದು ಎಂದರು.