​ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಅಭಿಪ್ರಾಯ ಸಂಗ್ರಹ

KannadaprabhaNewsNetwork |  
Published : Jul 31, 2026, 04:15 AM IST
29 ಜೆ.ಜಿ.ಎಲ್.3) ನೂತನ ಜಿಲ್ಲಾ  ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ವೀಕ್ಷಕರಾದ ರಾಹುಲ್ ಬಾಲ್ ಅವರು ಬುಧವಾರ ಜಗಳೂರು ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಗೆ ಭೇಟಿ ನೀಡಿದರು. 29  ಜೆ.ಜಿ.ಎಲ್.4)  ಜಿಲ್ಲಾ ಅಧ್ಯಕ್ಷರಾಯ್ಕೆ ಆಕಾಂಕ್ಷಿಗಳ ನಾಯಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಿದರು. | Kannada Prabha

ಸಾರಾಂಶ

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಕಾವು ಪಡೆದುಕೊಂಡಿದ್ದು, ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ವೀಕ್ಷಕ ರಾಹುಲ್ ಬಾಲ್ ಬುಧವಾರ ಜಗಳೂರು ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಗೆ ಭೇಟಿ ನೀಡಿ ಪ್ರಮುಖ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.

- ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಹೈಕಮಾಂಡ್‌ಗೆ ವರದಿ: ರಾಹುಲ್‌ ಬಾಲ್‌ ಹೇಳಿಕೆ

- - -

ಕನ್ನಡಪ್ರಭ ವಾರ್ತೆ ಜಗಳೂರು

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಕಾವು ಪಡೆದುಕೊಂಡಿದ್ದು, ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ವೀಕ್ಷಕ ರಾಹುಲ್ ಬಾಲ್ ಬುಧವಾರ ಜಗಳೂರು ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಗೆ ಭೇಟಿ ನೀಡಿ ಪ್ರಮುಖ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದರು.

ರಾಹುಲ್ ಬಾಲ್ ಈ ಸಂದರ್ಭ ಮಾತನಾಡಿ, ಈ ಹಿಂದೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ನೇರವಾಗಿ ಹೈಕಮಾಂಡ್ ನಿರ್ಧರಿಸುತ್ತಿತ್ತು. ಆದರೆ, ಈಗ ಆ ಪದ್ಧತಿಯಲ್ಲಿ ಬದಲಾವಣೆ ತರಲಾಗಿದೆ. ಕ್ಷೇತ್ರವಾರು ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಪಕ್ಷದ ಸಿದ್ಧಾಂತಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿದ ಪ್ರತಿ ಕಾರ್ಯಕರ್ತ ಮತ್ತು ನಾಯಕನಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

​ಒನ್-ಟು-ಒನ್ ಚರ್ಚೆ:

ಆಕಾಂಕ್ಷಿಗಳೊಂದಿಗೆ ''''ಒನ್ ಟು ಒನ್'''''''' ಮುಖಾಮುಖಿ ಚರ್ಚೆ ನಡೆಸಲಾಗಿದೆ. ಜಗಳೂರು ಕ್ಷೇತ್ರದಿಂದ ಕೆಪಿಸಿಸಿ ಸದಸ್ಯ ಕಲ್ಲೇಶ್‌ರಾಜ್ ಪಟೇಲ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರು, ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಅನೇಕ ಅರ್ಹ ನಾಯಕರು ಅಧ್ಯಕ್ಷರಾಗುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್ ನಡೆಸುತ್ತಿರುವ ಈ ಪಾರದರ್ಶಕ ಆಯ್ಕೆ ಪ್ರಕ್ರಿಯೆಗೆ ನಮ್ಮ ಸಂಪೂರ್ಣ ಸಹಕಾರವಿದೆ. ಅಂತಿಮವಾಗಿ ಹೈಕಮಾಂಡ್ ಯಾರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೂ ಅವರೊಂದಿಗೆ ಕೈಜೋಡಿಸಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇವೆ ಎಂದು ಹೇಳಿದರು.

​ಸಭೆಯಲ್ಲಿ ಶಾಸಕ ಬಿ.ದೇವೇಂದ್ರಪ್ಪ, ಬ್ರಾಹ್ಮಣ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕೆ.ಪಿ.ಸಿ.ಸಿ. ಸದಸ್ಯ ಕಲ್ಲೇಶ್‌ ರಾಜ್‌ ಪಟೇಲ್‌, ಕೆಪಿಸಿಸಿ ಎಸ್‌ಟಿ ಘಟಕದ ಮಾಜಿ ಅಧ್ಯಕ್ಷ ಕೆ.ಪಿ. ಪಾಲಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್ ಅವರಿಂದ ಪ್ರತ್ಯೇಕವಾಗಿ ಅಭಿಪ್ರಾಯಗಳನ್ನು ಸ್ವೀಕರಿಸಿದರು.

ಕೆಪಿಸಿಸಿ ಸದಸ್ಯ ಕಲ್ಲೇಶ್‌ ರಾಜ್‌ ಪಟೇಲ್‌,ಕೆಪಿಸಿಸಿ ಎಸ್‌ಟಿ ಘಟಕದ ಮಾಜಿ ಅಧ್ಯಕ್ಷ ಕೆ.ಪಿ. ಪಾಲಯ್ಯ ಇತರರು ಅಧ್ಯಕ್ಷ ಆಕಾಂಕ್ಷಿಯಾಗಿ ವೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧ್ಯಕ್ಷ ಮಂಜುನಾಥ್‌, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಷಂಷೀರ್ ಅಹಮದ್, ಕಂಬತ್ತಳ್ಳಿ ಮಂಜುನಾಥ್, ಪಿ.ಸುರೇಶ್‌ ಗೌಡ, ಮಹೇಶ್ವರಪ್ಪ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.

- - -

-29ಜೆಜಿಎಲ್3: ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ವೀಕ್ಷಕ ರಾಹುಲ್ ಬಾಲ್ ಬುಧವಾರ ಜಗಳೂರು ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಗೆ ಭೇಟಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಣು ಹುಲಿಗೆ ರೂಟ್ ಕೆನಾಲ್‌ ಚಿಕಿತ್ಸೆ
ಆಧಾರಗಳ ಮೂಲಕ ಸತ್ಯಸಂಗತಿ ತಿಳಿಯಬೇಕು