ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ರಾಜ್ಯಕ್ಕೆ ಮಾದರಿ

KannadaprabhaNewsNetwork |  
Published : Aug 15, 2026, 02:30 AM IST
ಚಿತ್ರ 14ಬಿಡಿಆರ್58 | Kannada Prabha

ಸಾರಾಂಶ

District Friendly Cooperative Union is a model for the state

* ವಾರ್ಷಿಕ ವರದಿ ಮಂಡನೆ

- 15ನೇ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಸಹಕಾರಿಯ ನಿರ್ದೇಶಕ ಗುರುನಾಥ ಜಾಂತಿಕರ ಅಭಿಮತಕನ್ನಡಪ್ರಭ ವಾರ್ತೆ ಬೀದರ್

ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ರಾಜ್ಯದಲ್ಲಿಯೇ ಮಾದರಿ ಸಹಕಾರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜಾಂತಿಕರ ಹೇಳಿದರು.

ನಗರದ ಸಾಮರ್ಥ್ಯ ಕೇಂದ್ರ, ಕಲ್ಯಾಣ ಪತ್ತಿನ ಸೌಹಾರ್ದದಲ್ಲಿ ನಡೆದ ಬೀದರ್‌ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ 15ನೇ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿಯೇ ಮೊದಲ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಬೀದರ್‌ ಜಿಲ್ಲೆಯಲ್ಲಿ ರಚನೆಯಾಗಿದ್ದು, ಒಕ್ಕೂಟವು ಸಹಕಾರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಹಿರಿಯ ಸಹಕಾರಿ ಧುರೀಣರಾದ ಭೀಮಣ್ಣ ಖಂಡ್ರೆ ಹಾಗೂ ಸಾಯಿ ಸೌಹಾರ್ದ ಸಹಕಾರಿಯ ಶಂಕರ ಗೌಳಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಒಕ್ಕೂಟದ ನಿರ್ದೇಶಕ ರಾಜಶೇಖರ ನಾಗಮೂರ್ತಿ ಸಭೆಯನ್ನು ನಡೆಸಿಕೊಟ್ಟರು. ಸಹಕಾರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಒಕ್ಕೂಟದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಮೃತ ಹೊಸಮನಿ ಸಭೆಯ ನೋಟಿಸ್, ಕೋರಂ ಹಾಗೂ ಗೈರು ಹಾಜರಾತಿ ಕುರಿತು ಮಾಹಿತಿ ನೀಡಿದರು. ಶ್ರೀಕಾಂತ ಸ್ವಾಮಿ ಸ್ವಾಗತಿಸಿ ಪರಿಚಯ ನೀಡಿದರು.

2025-26ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ಸಂಜಯ ಕ್ಯಾಸ್, ವಾರ್ಷಿಕ ವರದಿಯನ್ನು ಬಸವರಾಜ ಹುಡಗೆ ಮಂಡಿಸಿದರು. 2026-27, 2027-28 ಹಾಗೂ 2028-29ನೇ ಸಾಲಿನ ಕ್ರಿಯಾ ಯೋಜನೆಯನ್ನು ಸಂಜೀವಕುಮಾರ ಸಜ್ಜನ್ ಮಂಡಿಸಿದರು. 2025-26ನೇ ಸಾಲಿನ ಸದಸ್ಯತ್ವ ಪಟ್ಟಿಯನ್ನು ಶಿವಬಸಪ್ಪ ಚನಮಲೆ ಮಂಡಿಸಿದರು. 2026-27, 2027-28 ಹಾಗೂ 2028-29ನೇ ಸಾಲಿನ ಅಂದಾಜು ಆಯವ್ಯಯವನ್ನು ಮಾಯಾದೇವಿ ಮಂಡಿಸಿ ಸಭೆಯ ಅನುಮೋದನೆ ಪಡೆದರು. 2026-27ನೇ ಸಾಲಿನ ಲೆಕ್ಕಪರಿಶೋಧಕರ ನೇಮಕಾತಿ ಕುರಿತು ರಾಜಶೇಖರ ನಾಗಮೂರ್ತಿ ಮಾಹಿತಿ ನೀಡಿದರು.

ಸಂಜೀವಕುಮಾರ ಬಿ. ಪಾಟೀಲ್ ನಿರೂಪಿಸಿದರು. ಶ್ರೀಕಾಂತ ಸ್ವಾಮಿ ವಂದಿಸಿದರು.

ಇದೇ ಸಂದರ್ಭದಲ್ಲಿ ಉತ್ತಮ ಸಹಕಾರಿಯಾಗಿ ಆಯ್ಕೆಯಾದ ಸಿದ್ಧಾರೂಢ ಸೌಹಾರ್ದದ ಅಧ್ಯಕ್ಷರು ಹಾಗೂ ಶ್ರೇಷ್ಠ ಸಹಕಾರಿಯಾಗಿ ಆಯ್ಕೆಯಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದದ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.

--

ಚಿತ್ರ 14ಬಿಡಿಆರ್58:

ಬೀದರ್ ನಗರದ ಕಲ್ಯಾಣ ಪತ್ತಿನ ಸೌಹಾರ್ದದಲ್ಲಿ ಶುಕ್ರವಾರ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೀಲ್ಸ್ ಕಾಲದಲ್ಲೂ ಚಿತ್ರಮಂದಿರ ನಿರ್ಮಾಣ ಧೈರ್ಯದ ಕೆಲಸ
ಆಟೋ ನಿಲ್ದಾಣ ನಿರ್ಮಾಣ ಸಾಮಗ್ರಿಗಳ ತೆರವು: ಆಟೋ ಚಾಲಕರ ಸಂಘ ಆಕ್ರೋಶ