* ವಾರ್ಷಿಕ ವರದಿ ಮಂಡನೆ
ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ರಾಜ್ಯದಲ್ಲಿಯೇ ಮಾದರಿ ಸಹಕಾರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಗುರುನಾಥ ಜಾಂತಿಕರ ಹೇಳಿದರು.
ನಗರದ ಸಾಮರ್ಥ್ಯ ಕೇಂದ್ರ, ಕಲ್ಯಾಣ ಪತ್ತಿನ ಸೌಹಾರ್ದದಲ್ಲಿ ನಡೆದ ಬೀದರ್ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ 15ನೇ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿಯೇ ಮೊದಲ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಬೀದರ್ ಜಿಲ್ಲೆಯಲ್ಲಿ ರಚನೆಯಾಗಿದ್ದು, ಒಕ್ಕೂಟವು ಸಹಕಾರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.ಹಿರಿಯ ಸಹಕಾರಿ ಧುರೀಣರಾದ ಭೀಮಣ್ಣ ಖಂಡ್ರೆ ಹಾಗೂ ಸಾಯಿ ಸೌಹಾರ್ದ ಸಹಕಾರಿಯ ಶಂಕರ ಗೌಳಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಒಕ್ಕೂಟದ ನಿರ್ದೇಶಕ ರಾಜಶೇಖರ ನಾಗಮೂರ್ತಿ ಸಭೆಯನ್ನು ನಡೆಸಿಕೊಟ್ಟರು. ಸಹಕಾರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಒಕ್ಕೂಟದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಮೃತ ಹೊಸಮನಿ ಸಭೆಯ ನೋಟಿಸ್, ಕೋರಂ ಹಾಗೂ ಗೈರು ಹಾಜರಾತಿ ಕುರಿತು ಮಾಹಿತಿ ನೀಡಿದರು. ಶ್ರೀಕಾಂತ ಸ್ವಾಮಿ ಸ್ವಾಗತಿಸಿ ಪರಿಚಯ ನೀಡಿದರು.
ಸಂಜೀವಕುಮಾರ ಬಿ. ಪಾಟೀಲ್ ನಿರೂಪಿಸಿದರು. ಶ್ರೀಕಾಂತ ಸ್ವಾಮಿ ವಂದಿಸಿದರು.
--
ಬೀದರ್ ನಗರದ ಕಲ್ಯಾಣ ಪತ್ತಿನ ಸೌಹಾರ್ದದಲ್ಲಿ ಶುಕ್ರವಾರ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಜರುಗಿತು.