ಯೋಜನೆಗಳ ಅನುದಾನ ಹಿಂತಿರುಗಿದರೆ ಕಠಿಣ ಕ್ರಮ

KannadaprabhaNewsNetwork |  
Published : Jan 22, 2025, 12:30 AM IST
೨೧ಕೆಎಲ್‌ಆರ್-೧೩ಕೋಲಾರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಏಕರೂಪ್ ಕೌರ್ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಜಿಲ್ಲೆಯ ಯೋಜನೆಗಳ ಎಲ್ಲಾ ಟೆಂಡರ್ ಪ್ರಕ್ತಿಯೆ ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದ ಅವರು, ವರ್ಷಾಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಅನುದಾನ ಸಂಪೂರ್ಣವಾಗಿ ವೆಚ್ಚ ಮಾಡುವ ಅವಕಾಶದಿಂದ ವಂಚಿತರಾಗುತ್ತೀರಿ, ಸಾರ್ವಜನಿಕರ ರಿಗೆ ಹಣ ವ್ಯರ್ಥ ಮಾಡಿದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಏಕರೂಪ್ ಕೌರ್ ಜಿಲ್ಲೆಯ ವಿವಿಧ ಕಛೇರಿಗಳಿಗೆ ಹಾಗೂ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿ, ಇಲಾಖೆಯ ನಗರೋತ್ತಾನ ಅಮೃತ ಯೋಜನೆ ಎಸ್.ಎಫ್.ಸಿ/ಎಸ್.ಸಿ.ಪಿ, ೧೫ನೇ ಹಣ ಕಾಸು ಯೋಜನೆಗಳು ಸ್ವಚ್ಛ ಭಾರತ್ ಮಿಷನ್ ಅಮೃತ್-೨ ಮತ್ತು ಇಂದಿರಾಕ್ಯಾಂಟಿನ್ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ನಿರೀಕ್ಷಿತ ಪ್ರಗತಿಯಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು.

ಬಾಕಿ ಕಾಮಗಾರಿ ಪೂರ್ಣಗೊಳಿಸಿನಗರೋತ್ಥಾನ ಯೋಜನೆಯಡಿ ಜಿಲ್ಲೆಯಲ್ಲಿ ೧೪೫ ಕೋಟಿ ರೂಪಾಯಿ ಅನುದಾನವಿದ್ದು, ಅದರಲ್ಲಿ ಇನ್ನು ೧೭ ಟೆಂಡರ್ ಕಾಮಗಾರಿಗಳು ಬಾಕಿ ಉಳಿದಿವೆ, ಕೆಜಿಎಫ್ ನಗರಸಭೆಯಲ್ಲಿ ಎರಡು ಕಾಮಗಾರಿಗಳು ಶ್ರೀನಿವಾಸಪುರ ಪುರಸಭೆಯಲ್ಲಿ ಮೂರು ಕಾಮಗಾರಿಗಳು ಕೋಲಾರ ನಗರಸಭೆಯಲ್ಲಿ ಏಳು ಕಾಮಗಾರಿಗಳು ಬಾಕಿ ಇದೆ, ಈ ಎಲ್ಲಾ ಟೆಂಡರ್ ಪ್ರಕ್ತಿಯೆ ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದ ಅವರು, ವರ್ಷಾಂತ್ಯಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಅನುದಾನ ಸಂಪೂರ್ಣವಾಗಿ ವೆಚ್ಚ ಮಾಡುವ ಅವಕಾಶದಿಂದ ವಂಚಿತರಾಗುತ್ತೀರಿ, ಸಾರ್ವಜನಿಕರ ರಿಗೆ ಹಣ ವ್ಯರ್ಥ ಮಾಡಿದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ನಾಗರೀಕರಿಗೆ ಕನಿಷ್ಠ ಸೌಕರ್ಯವಾದ ಕುಡಿಯುವ ನೀರನ್ನು ಒದಗಿಸುವುದು, ನಿಮ್ಮ ಇಲಾಖೆಯ ಮುಖ್ಯ ಜವಾಬ್ದಾರಿ ಇದನ್ನು ಸರ್ಮಪಕವಾಗಿ ನಿರ್ವಹಿಸಬೇಕು, ಪೌರ ಕಾರ್ಮಿಕರಿಗೆ ಮನೆಗಳ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯ ಸಹ ಪೂರ್ಣ ಪ್ರಗತಿಯಾಗಿಲ್ಲ, ಮುಂದಿನ ಜನವರಿ ೨೪ ರೊಳಗೆ ಎಲ್ಲಾ ಟೆಂಡರ್‌ಗಳು ಮುಗಿಸಿರಬೇಕು ಎಂದು ತಿಳಿಸಿದರು.ಯರಗೊಳ್ ಡ್ಯಾಂ ನೀರು

ಅಮೃತ ಯೋಜನೆಯಡಿಯಲ್ಲಿ ಮುಳಬಾಗಿಲು, ಶ್ರೀನಿವಾಸಪುರ, ವೇಮಗಲ್ ನಗರಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲು ಯಾವುದೇ ನದಿಗಳ ಮೂಲ ಇಲ್ಲ. ಆದ್ದರಿಂದ ಎತ್ತಿನಹೊಳೆ ಯೋಜನೆ ಜಾರಿಗೆ ಬಂದ ನಂತರ ಈ ನಗರಗಳಲ್ಲಿ ಅಮೃತ ಯೋಜನೆ ಅನುಷ್ಠಾನಕ್ಕೆ ತರಲಾಗುವುದು, ಮಾಲೂರು ಮತ್ತು ಬಂಗಾರಪೇಟೆ ನಗರಗಳಿಗೆ ಯರಗೊಳ್ ಡ್ಯಾಂ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಸಣ್ಣಪುಟ್ಟ ಕಾಮಗಾರಿಗಳ ಟೆಂಡರ್ ಬಾಕಿ ಉಳಿದಿವೆ ಎಂದು ಸಭೆಗೆ ತಿಳಿಸಿದರು.ಕೋಲಾರ ಜಿಲ್ಲೆಯ ಮೂರು ನಗರಗಳಲ್ಲಿ ಮಾತ್ರ ಇಂದಿರಾ ಕ್ಯಾಂಟಿನ್ ಕಾರ್ಯನಿರ್ವಹಿಸುತ್ತಿದೆ. ಉಳಿದ ಕಡೆ ಕಾರ್ಯರೂಪಕ್ಕೆ ತರಬೇಕು ಮತ್ತು ಉತ್ತಮ ಗುಣಮಟ್ಟದ ಆಹಾರ ಸಾರ್ವಜನಿಕರಿಗೆ ಒದಗಿಸಬೇಕು. ಪ್ರತಿದಿನ ಒಂದು ಊಟಕ್ಕೆ ಸರ್ಕಾರದಿಂದ ೬೭ ರೂಪಾಯಿ ಬರುತ್ತದೆ, ಗ್ರಾಹಕರಿಂದ ೨೫ ರೂಪಾಯಿ ಪಡೆಯುತ್ತಾರೆ ಒಟ್ಟು ೯೨ ರೂಪಾಯಿ ಗುತ್ತಿಗೆದಾರರು ಪಡೆಯುತ್ತಿದ್ದಾರೆ ಅದಕ್ಕೆ ತಕ್ಕಂತೆ ಊಟ ನೀಡಲು ಅಧಿಕಾರಿಗಳು ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು. ಮತಪಟ್ಟಿ ಪರಿಷ್ಕರಣೆ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷರಣೆಯ ವೀಕ್ಷಕರಾಗಿ ೩ನೇ ಭೇಟಿ ನೀಡಿದ ಕಾರ್ಯದರ್ಶಿಗಳು ಈ ವರೆಗೆ ಮತದಾರರ ಪಟ್ಟಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲಾಗಿದೆ. ಎಪಿಕ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು ೬೩ ದೂರುಗಳು ಬಂದಿವೆ. ಅದರಲ್ಲಿ ಎಲ್ಲಾ ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೮೨೧೫ ಮತದಾರರಿದ್ದು ಅದರಲ್ಲಿ ೩೪೦೦ಮತದಾರರು ಯುವ ಮತದಾರರು ಆಗಿರುವುದು ವಿಶೇಷ ಎಂದು ಅಪರ ಜಿಲ್ಲಾಧಿಕಾರಿ ಮಂಗಳ ಸಭೆಗೆ ಮಾಹಿತಿ ನೀಡಿದರು.ಸಭೆಗೆ ಮುನ್ನ ಉಸ್ತುವಾರಿ ಕಾರ್ಯದರ್ಶಿ ಜಿಲ್ಲಾಧಿಕಾರಿಗಳೊಂದಿಗೆ ವೇಮಗಲ್‌ನಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾಕ್ಯಾಂಟೀನ್ ಕಟ್ಟಡ ಕಾಮಗಾರಿ, ಶೆಟ್ಟಿಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಲಾರ ನಗರದ ದರ್ಗಾ ಮೊಹಲ್ಲಾದ ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಹಾಗೂ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಉಪವಿಭಾಗಧಿಕಾರಿ ಡಾ.ಮೈತ್ರಿ, ಪೌರಾಡಳಿತ ಇಲಾಖೆಯ ಯೋಜನಾ ನಿರ್ದೇಶಕಿ ಅಂಬಿಕಾ ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...