ದಾಂಡೇಲಿಯಲ್ಲಿ ಇಂದಿನಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

KannadaprabhaNewsNetwork |  
Published : Dec 13, 2025, 02:45 AM IST
ಎಚ್೧೨.೧೨-ಡಿಎನ್‌ಡಿ೧ ಮತ್ತು 2: ೨೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮೂರು ದಿನಗಳ ಕನ್ನಡ ಹಬ್ಬದ ಕ್ಷಣ ಗಣನೆ | Kannada Prabha

ಸಾರಾಂಶ

ಡಿ. ೧೩ರಿಂದ ಡಿ. ೧೫ರ ವರೆಗೆ ನಗರಸಭೆಯ ಮೈದಾನದಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ ೨೫ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಭವ್ಯವಾದ ಮೆರವಣಿಗೆ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತದೆ.

ದಾಂಡೇಲಿ: ಡಿ. ೧೩ರಿಂದ ಡಿ. ೧೫ರ ವರೆಗೆ ನಗರಸಭೆಯ ಮೈದಾನದಲ್ಲಿ ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ ೨೫ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಸಮ್ಮೇಳನದಲ್ಲಿ ಸರ್ವರೂ ಭಾಗವಹಿಸುವ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ದಾಂಡೇಲಿ ತಹಸೀಲ್ದಾರ್‌ ಶೈಲೇಶ ಪರಮಾನಂದ ಕರೆ ನೀಡಿದ್ದಾರೆ.

ಅವರು ಸಮ್ಮೇಳನ ನಡೆಯುವ ನಗರಸಭೆಯ ಮೈದಾನದಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ವೀಕ್ಷಿಸಿ, ಮಾಧ್ಯಮದವರ ಜತೆ ಮಾತನಾಡಿದರು. ಭವ್ಯವಾದ ಮೆರವಣಿಗೆ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಗುತ್ತಿದ್ದು, ಮೂರು ದಿನಗಳ ಈ ಸಮ್ಮೇಳನದಲ್ಲಿ ಕನ್ನಡಾಭಿಮಾನಿಗಳು ಸಕ್ರಿಯರಾಗಿ ಪಾಲ್ಗೊಂಡು ಸಮ್ಮೇಳನವನ್ನು ಸ್ಮರಣೀಯಗೊಳಿಸಬೇಕು ಎಂದು ವಿನಂತಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಉ.ಕ. ಜಿಲ್ಲಾ ೨೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ದಾಂಡೇಲಿಯಲ್ಲಿ ಮನೆ ಮಾತಾಗಿದೆ. ಜಿಲ್ಲೆಯ ಹಿರಿಯ ಸಾಹಿತಿ ರೋಹಿದಾಸ ನಾಯ್ಕ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನವನ್ನು ನಾಡಿನ ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಯಲ್ಲಿ ನಾಡಿನ ೧೦ ಕಲಾತಂಡಗಳು, ಭಾಗವಹಿಸುವ ಮೂಲಕ ಮೆರವಣಿಗೆಗೆ ವಿಶೇಷವಾದ ಮೆರುಗು ತಂದು ಕೊಡಲಿದೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ೨೫ ಕನ್ನಡ ಸಾಹಿತ್ಯ ಕೃತಿಗಳು ಲೋಕಾರ್ಪಣೆಯಾಗಲಿದೆ. ಈ ಹಿಂದಿನ ಎಲ್ಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಗೌರವ ಸನ್ಮಾನ ನಡೆಯಲಿದೆ. ವಿವಿಧ ಕ್ಷೇತ್ರಗಳ ೨೫ ಜನರಿಗೆ ಗೌರವ ಪುರಸ್ಕಾರ ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳ ೨೫ ಸಾಧಕರಿಗೆ ರಜತ ಗೌರವ ನೀಡಲಾಗುತ್ತಿದೆ. ಈ ಸಮ್ಮೇಳನದಲ್ಲಿ ನಾಡು-ನುಡಿ, ಭಾಷೆ ಹಾಗೂ ನಾಡಿನ ಸಮಗ್ರ ಅಭಿವೃದ್ಧಿಯ ಕುರಿತಂತೆ ವಿಚಾರಗೋಷ್ಠಿಗಳು ನಡೆಯಲಿದೆ ಎಂದು ಹೇಳಿದರು. ನಾಲ್ಕು ಪ್ರಾಧಿಕಾರಗಳ ಅಧ್ಯಕ್ಷರು ಒಂದೇ ವೇದಿಕೆಯಲ್ಲಿ ಭಾಗವಹಿಸುತ್ತಿರುವುದು ಈ ಸಮ್ಮೇಳನದ ವಿಶೇಷವಾಗಿದೆ. ದಾಂಡೇಲಿ ಇಡೀ ಕನ್ನಡಮಯವಾಗಿದೆ. ಇಲ್ಲಿಯ ಕನ್ನಡದ ಮನಸ್ಸುಗಳು ಈ ಅಕ್ಷರ ಜಾತ್ರೆಯ ಯಶಸ್ಸಿಗಾಗಿ ಅವಿರತ ಶ್ರಮಿಸುತ್ತಿವೆ. ಮೂರು ದಿನಗಳ ಈ ಅಕ್ಷರ ಜಾತ್ರೆಯಲ್ಲಿ ಎಲ್ಲ ಕನ್ನಡಾಭಿಮಾನಿಗಳೂ ಭಾಗವಹಿಸಿ, ಈ ಸಮ್ಮೇಳನವನ್ನು ಅರ್ಥಪೂರ್ಣ ಹಾಗೂ ಅವಿಸ್ಮರಣೀಯವಾಗಿಸಲು ಸಹಕರಿಸುವಂತೆ ವಿನಂತಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ ಆನೆಹೊಸೂರ, ಎಸ್.ಎಚ್.ಗೌಡ, ಎಂ.ಆರ್. ನಾಯಕ, ಪ್ರವೀಣ ನಾಯಕ, ಮುಸ್ತಾಕ ಶೇಖ, ರಿವ ಸುತಾರ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ