ಬಂಟವಾಳದ ಬಂಟರ ಸಂಘದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಬಂಟರ ಮಹಿಳಾ ಘಟಕದ ಸದಸ್ಯರು ಪ್ರಥಮ ಬಹುಮಾನ ಪಡೆದಿರುತ್ತಾರೆ.
ಕನ್ನಡಪ್ರಭ ವಾರ್ತೆ ಮೂಡುಬಿದಿರೆಬಂಟವಾಳದ ಬಂಟರ ಸಂಘದ ವಿಂಶತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಬಂಟರ ಮಹಿಳಾ ಘಟಕದ ಸದಸ್ಯರು ಪ್ರಥಮ ಬಹುಮಾನ ಪಡೆದಿರುತ್ತಾರೆ.
ಮೇ 25 ರಂದು ಬಂಟವಾಳದ ಬಂಟರ ಭವನದಲ್ಲಿ ನಡೆದ ನೃತ್ಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 10 ತಂಡಗಳು ಭಾಗವಹಿಸಿದ್ದು, ಮೂಡುಬಿದಿರೆ ಬಂಟರ ಸಂಘಕ್ಕೆ ಪ್ರಥಮ ಬಹುಮಾನ ಲಭಿಸಿರುತ್ತದೆ.ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ್ ಶೆಟ್ಟಿ ರಂಗೋಲಿ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ , ಖ್ಯಾತ ವಕೀಲ ಅಶ್ವನಿ ಕುಮಾರ್ ರೈ, ಉದ್ಯಮಿ ಎಂ ಸಿ ಆರ್ ಶೆಟ್ಟಿ, ದಂತ ವೈದ್ಯ ಡಾ. ರಾಜ ಮೋಹನ್ ಶೆಟ್ಟಿ, ಸುಧಾಕರ್ ಶೆಟ್ಟಿ ಸುಗ್ಗಿ, ಹರ್ಷ ಮೇಲಾಂಟ, ಪ್ರಸನ್ನ ಶಂಕರ್ ಶೆಟ್ಟಿ ಹುಬ್ಬಳ್ಳಿ ಹಾಗೂ ಬಂಟವಾಳ ಬಂಟರ ಸಂಘದ ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆಯ ವಿವಿದ ಬಂಟರ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
ಬಹುಮಾನವನ್ನು ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಶಿವಪ್ರಸಾದ್ ಹೆಗ್ಡೆ ಅವರು ತಮ್ಮ ತಂಡದೊಂದಿಗೆ ಸ್ವೀಕರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ಬಂಟರ ಸಂಘದ ಮಾಜಿ ಅಧ್ಯಕ್ಷ ಲೋಕನಾಥ್ ಶೆಟ್ಟಿ ವಹಿಸಿದ್ದರು. ನೃತ್ಯ ಸಂಯೋಜನೆ ಹಾಗೂ ತರಬೇತಿಯನ್ನು ಟ್ವಿಸ್ಟರ್ಸ್ ಡಾನ್ಸ್ ಅಕಾಡೆಮಿಯ ನಿತಿನ್ ಅವರು ಆಯೋಜಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.