23ಕ್ಕೆ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಸಮಾವೇಶ

KannadaprabhaNewsNetwork |  
Published : Feb 20, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುನಗರದಲ್ಲಿ ಇದೇ ಫೆ.23 ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ. ಸಿ.ಶಿವಾನಂದಸ್ವಾಮಿ ಸೂಚಿಸಿದರು.

ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಾನಂದಸ್ವಾಮಿ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ನಗರದಲ್ಲಿ ಇದೇ ಫೆ.23 ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ. ಸಿ.ಶಿವಾನಂದಸ್ವಾಮಿ ಸೂಚಿಸಿದರು.

ನಗರದ ತಾಪಂನಲ್ಲಿ ಗುರುವಾರ ಗ್ಯಾರಂಟಿ ಪ್ರಾಧಿಕಾರ ಅನುಷ್ಟಾನದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚ ಗ್ಯಾರಂಟಿ ಕಾರ್ಯಾಗಾರ ಕುರಿತ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಫೆ.23ರ ಬೆಳಗ್ಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಕಾರ್ಯಾಗಾರದ ಸಮಾವೇಶನ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆಜಾದ್‌ಪಾರ್ಕ್ ವೃತ್ತ ದಿಂದ ಕುವೆಂಪು ಕಲಾಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಹಾಗೂ ಫಲಾನುಭವಿಗಳೊಂದಿಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಾಗಾರದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಎಲ್ಲಾ ತಾಲೂಕಿನ ಅಧ್ಯಕ್ಷರು ಪೂರ್ವಭಾವಿ ಸಭೆ ನಡೆಸಿ ಮುಂದಿನ ಕಾರ್ಯಕ್ರಮಕ್ಕೆ ಸಜ್ಜಾಗಿದ್ದಾರೆ. ಅಂದಿನ ಕಾರ್ಯಕ್ರಮ ದಲ್ಲಿ ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ರೇವಣ್ಣ, ಉಪಾಧ್ಯಕ್ಷರು, ಮಂತ್ರಿಗಳು, ಶಾಸಕರು ಭಾಗವಹಿಸಲಿದ್ದಾರೆ ಎಂದರು.

ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್ ಮಾತನಾಡಿ, ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳು ಅತ್ಯುತ್ತಮ ವಾಗಿ ನಡೆಯುತ್ತಿದೆ. ಗ್ಯಾರಂಟಿಯಿಂದ ಅನೇಕ ಕುಟುಂಬಗಳು ಆರ್ಥಿಕ ಸಬಲರಾಗುವ ಮೂಲಕ ಹೊಸ ಜೀವನಕ್ಕೆ ಮಾದರಿಯಾಗಿವೆ ಎಂದು ಹೇಳಿದರು.

ತಾಲೂಕು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಅನ್ಸರ್ ಆಲಿ ಮಾತನಾಡಿ ಪಡಿತರ ಚೀಟಿಯಲ್ಲಿ ಸಮಸ್ಯೆ ಕಂಡುಬಂದಲ್ಲಿ ಗ್ಯಾರಂಟಿ ಅಧ್ಯಕ್ಷರ ಕಚೇರಿ ಅಥವಾ ತಾಲೂಕು ಆಡಳಿತಕ್ಕೆ ಭೇಟಿ ನೀಡಿ ಪರಿಹರಿಸಲು ಅವಕಾಶವಿದೆ. ಹೀಗಾಗಿ ಫಲಾನು ಭವಿಗಳು ಗೊಂದಲಕ್ಕೆ ಒಳಗಾಗಬಾರದು. ಸರ್ಕಾರದ ಗ್ಯಾರಂಟಿ ಸವಲತ್ತು ಸಮರ್ಪಕವಾಗಿ ಒದಗಿಸಲಾಗುವುದು ಎಂದರು.

ಸಭೆಯಲ್ಲಿ ತಾಪಂ ಮುಖ್ಯ ಅಧಿಕಾರಿ ವಿಜಯ್‌ಕುಮಾರ್, ಗ್ಯಾರಂಟಿ ತಾಲೂಕು ಸದಸ್ಯರಾದ ಗೌಸ್ ಮೊಹಿಯುದ್ದೀನ್, ಧರ್ಮಯ್ಯ ಉಪಸ್ಥಿತರಿದ್ದರು.

ಫೋಟೋ

ಜಿಲ್ಲಾ ಪಂಚಾಗ್ಯಾರಂಟಿ ಉತ್ಸವದ ಫೋಸ್ಟರ್‌ ಅನ್ನು ಜಿಲ್ಲಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ. ಸಿ.ಶಿವಾನಂದಸ್ವಾಮಿ ಬಿಡುಗಡೆ ಮಾಡಿದರು. ಈ ವೇಳೆ ತಾಲೂಕು ಅಧ್ಯಕ್ಷ ಮಹೇಶ್‌, ಉಪಾಧ್ಯಕ್ಷ ಅನ್ಸರ್ ಆಲಿ ಸೇರಿದಂತೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮೂರು ದಿನ ಫಲಪುಷ್ಪ ಪ್ರದರ್ಶನ: ಜಿಪಂ ಸಿಇಒ ಡಾ.ಆಕಾಶ್
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮರಳಿ ತರಲು ಆಗ್ರಹ