ಫೆಬ್ರುವರಿ 23ಕ್ಕೆ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆ ಕಾರ್‍ಯಾಗಾರ: ಶಿವಾನಂದಸ್ವಾಮಿ

KannadaprabhaNewsNetwork |  
Published : Feb 11, 2026, 01:15 AM IST
ಸಸ | Kannada Prabha

ಸಾರಾಂಶ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಕಾರ್ಯಾಗಾರವನ್ನು ಫೆ.23ರಂದು ನಗರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಕಾರ್ಯಾಗಾರವನ್ನು ಫೆ.23ರಂದು ನಗರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದರು.

ನಗರದ ಜಿ.ಪಂ. ಮಿನಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಮಿತಿಯಿಂದ ಆಯೋಜಿಸಿದ್ಧ ಕಾರ್ಯಾಗಾರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು,

ಕಾರ್ಯಾಗಾರದಲ್ಲಿ ಜಿಲ್ಲೆಯ ಐದು ಗ್ಯಾರಂಟಿ ಯೋಜನೆಯ ಆಯ್ದ ಫಲಾನುಭವಿಗಳ ಸಂವಾದ, ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಅಮರನಾಥ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌.ಎಸ್.ಕೀರ್ತನಾ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಮೂಲಕ ರಾಜ್ಯ ಸರ್ಕಾರ ಈವರೆಗೆ 2175 ಕೋಟಿ ರು. ಮೊತ್ತದ ಸೌಲಭ್ಯವನ್ನು ನೀಡಿದೆ. ಒಟ್ಟಾರೆ ಜಿಲ್ಲೆಯ ಜನರ ಆರ್ಥಿಕ ಸಂಪನ್ಮೂಲ ಹೆಚ್ಚಳಗೊಳಿಸುವ ಜತೆಗೆ ಆರ್ಥಿಕ ಸಂಚಲನ ಮೂಡಿಸುವಲ್ಲಿ ಗ್ಯಾರಂಟಿ ಯೋಜನೆಗಳು ಫಲಪ್ರದವಾಗಿವೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ 25 ಕಂತುಗಳ ಮೂಲಕ 2.62 ಲಕ್ಷ ಕುಟುಂಬದ ಯಜಮಾನಿಯರಿಗೆ ಮಾಸಿಕ 52 ಕೋಟಿ ರು. ನಂತೆ ಒಟ್ಟು 1267 ಕೋಟಿ ರು. ನೀಡಲಾಗಿದೆ ಎಂದು ತಿಳಿಸಿದರು,

ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ಮಾತನಾಡಿ, ಜಿಲ್ಲೆಯ 3.06 ಲಕ್ಷ ಮೀಟರ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 10 ಲಕ್ಷ ಫಲಾನುಭವಿಗಳಿಗೆ ಸರ್ಕಾರ ಉಚಿತ ವಿದ್ಯುತ್ ಸರಬರಾಜು ಮಾಡಿದ್ದು, 327 ಕೋಟಿ ರು, ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ 2.44 ಲಕ್ಷ ಪಡಿತರ ಕಾರ್ಡ್‌ಗಳ 8.05 ಲಕ್ಷ ಫಲಾನುಭವಿಗಳಿಗೆ ಸರ್ಕಾರ 334 ಕೋಟಿ ರು. ಭರಿಸಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 5.59 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಿದ್ದು ಜಿಲ್ಲೆಯ ಸಾರಿಗೆ ಇಲಾಖೆಗೆ 232 ಕೋಟಿ ರು. ಸರ್ಕಾರದಿಂದ ಪಾವತಿಯಾಗಿದೆ. ಜಿಲ್ಲೆಯ 5641 ಯುವನಿಧಿ ಪಲಾನುಭವಿಗಳು ಈವರೆಗೆ 14 ಕೋಟಿ ರು. ಅವರವರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸಮೀವುಲ್ಲಾ, ಡೈರಿ ಮಂಜಣ್ಣ, ಹವ್ವಳ್ಳಿ ಕೃಷ್ಣೇಗೌಡ, ಚಂದ್ರಮೌಳಿ, ಹೇಮಾವತಿ ಸೇರಿದಂತೆ 9 ತಾಲೂಕು ಅಧ್ಯಕ್ಷರು, ಜಿಲ್ಲಾ ಸಮಿತಿ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲಿಂಗೇಗೌಡರನ್ನು ಕೊಬ್ಬರಿ ಕಳ್ಳ ಎಂದಿದ್ದು ತಪ್ಪು
14 ರಂದು ಬೃಹತ್ ಸಾಮೂಹಿಕ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞ