ಶಿವಮೊಗ್ಗ: ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಸಹಯೋಗದಲ್ಲಿ ಜಿಲ್ಲಾಮಟ್ಟದ ಕರೋಕೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಿಲ್ಲೆಯ ಆಸಕ್ತ ಹಾಗೂ ಹವ್ಯಾಸಿ ಗಾಯಕರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಂಘದ ನಿರ್ದೇಶಕ ರಾಮಚಂದ್ರ ಗುಣಾರಿ ಹೇಳಿದರು.
ವಿವಿಧ ಹಂತಗಳ ಸ್ಪರ್ಧೆಯು ನಡೆಯಲಿದೆ. ತೀರ್ಪುಗಾರರ ತೀರ್ಮಾನ ಅಂತಿಮವಾಗಿರುತ್ತದೆ. ಅನಂತರ ಈ ಪೈಕಿ ಅಂತಿಮವಾಗಿ ಆಯ್ಕೆಯಾಗುವ ಸ್ಪರ್ಧಿಗಳ ನಡುವೆ ಫೈನಲ್ ಹಣಾಹಣಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ₹200. ಪ್ರವೇಶ ಶುಲ್ಕ ನಿಗದಿಮಾಡಲಾಗಿದೆ. ಡಿ.14ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಎಂದು ತಿಳಿಸಿದರು.
ಆಸಕ್ತರು ಪತ್ರಿಕಾ ಭವನ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆರ್ಟಿಒ ರಸ್ತೆ ಶಿವಮೊಗ್ಗಕ್ಕೆ ನೇರವಾಗಿ ಭೇಟಿಯಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಥವಾ ಹೊನ್ನಾಳಿ ಚಂದ್ರಶೇಖರ್: 9844518866 , ರಾಮಚಂದ್ರ ಗುಣಾರಿ 9448093362, ಸಂತೋಷ್: 9632541408 ಅವರನ್ನು ವಾಟ್ಸಪ್ ಮೆಸೇಜ್ ಮೂಲಕ ಸಂಪರ್ಕಿಸಿ, ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಪ್ರೆಸ್ಟ್ರಸ್ಟ್ ಖಜಾಂಚಿ ಜೇಸುದಾಸ್ ಇದ್ದರು.