ನಾಳೆ ಕನ್ನಡಪ್ರಭದಿಂದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ

KannadaprabhaNewsNetwork |  
Published : Jan 17, 2026, 02:30 AM IST
16ಕೆಡಿವಿಜಿ9-ದಾವಣಗೆರೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಬ್ಯಾನರ್. | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿ ಪರಿಸರ, ವನ್ಯಜೀವಿ ಮತ್ತು ವನ್ಯ ಸಂಪತ್ತಿನ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಕನ್ನಡಪ್ರಭದಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಜ.18ರಂದು ನಗರದ ಶ್ರೀ ಜಯದೇವ ವೃತ್ತದ ಶ್ರೀ ಶಿವಯೋಗಿ ಮಂದಿರದ ಹಿಂಭಾಗದ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

- ಹೈಯರ್ ಪ್ರೈಮರಿ ಮಕ್ಕಳಿಗೆ ಜಿಲ್ಲಾಮಟ್ಟಕ್ಕೆ ಸೀಮಿತ ಸ್ಪರ್ಧೆ - ಹೈಸ್ಕೂಲ್ ಮಕ್ಕಳು ಜಿಲ್ಲಾ ಮಟ್ಟದಲ್ಲಿ ಗೆದ್ದರೆ ರಾಜ್ಯಮಟ್ಟಕ್ಕೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ವಿದ್ಯಾರ್ಥಿಗಳಲ್ಲಿ ಪರಿಸರ, ವನ್ಯಜೀವಿ ಮತ್ತು ವನ್ಯ ಸಂಪತ್ತಿನ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಕನ್ನಡಪ್ರಭದಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಜ.18ರಂದು ನಗರದ ಶ್ರೀ ಜಯದೇವ ವೃತ್ತದ ಶ್ರೀ ಶಿವಯೋಗಿ ಮಂದಿರದ ಹಿಂಭಾಗದ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9.30 ಗಂಟೆಗೆ ದಾವಣಗೆರೆ ನಗರ ಮತ್ತು ತಾಲೂಕು ಹಾಗೂ ಜಿಲ್ಲೆಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳು ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಥಮ ಮೂರು ಸ್ಥಾನ ಪಡೆದ ಸ್ಪರ್ಧಿಗಳು ಜಿಲ್ಲಾ ಮಟ್ಟಕ್ಕೆ ಪಾಲ್ಗೊಳ್ಳಬಹುದು. ಜಿಲ್ಲಾ ಮಟ್ಟಕ್ಕೆ ಸೀಮಿತವಾಗಿ ಪಾಲಕರು, ಪುಟ್ಟ ಮಕ್ಕಳ ಒತ್ತಾಸೆ ಮೇರೆಗೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಮಕ್ಕಳಿಗಾಗಿ ಪ್ರತ್ಯೇಕವಾಗಿ ಅದೇ ಸ್ಥಳದಲ್ಲಿ ಕನ್ನಡಪ್ರಭದಿಂದ ಸ್ಪರ್ಧೆ ಆಯೋಜಿಸಲಾಗಿದೆ.

ವನ್ಯಜೀವಿ ಮತ್ತು ವನ್ಯ ಸಂಪತ್ತು ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಭಾನುವಾರ ಬೆಳಗ್ಗೆ 9.30ರಿಂದ 11.30ರವರೆಗೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯದಲ್ಲಿ ಜನಪ್ರತಿನಿಧಿಗಳು, ವಿವಿಧ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಗಣ್ಯರು ಬಹುಮಾನ ವಿತರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ 3 ಸ್ಥಾನಕ್ಕೆ ಆಕರ್ಷಕ ಬಹುಮಾನ, ಉಳಿದ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಹೈಸ್ಕೂಲ್ ವಿಭಾಗದಲ್ಲಿ ಪ್ರಥಮ 3 ಸ್ಥಾನ ಪಡೆಯುವ ಸ್ಪರ್ಧಿಗಳು ರಾಜ್ಯಮಟ್ಟಕ್ಕೆ ಅರ್ಹತೆ ಪಡೆಯಲಿದ್ದಾರೆ. ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟಕ್ಕೆ ಸೀಮಿತವಾಗಿ ಸ್ಪರ್ಧೆ ನಡೆಯಲಿದೆ.

ಸೇವ್ ವೈಲ್ಡ್ ಲೈಫ್ ಅಭಿಯಾನದಡಿ ರಾಜ್ಯಮಟ್ಟದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಹಕಾರದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಸಹಯೋಗದಲ್ಲಿ ಹಾಗೂ ದಾವಣಗೆರೆ ಜಿಲ್ಲಾಮಟ್ಟದ ಸ್ಪರ್ಧೆ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳು, ಸರ್ಕಾರಿ ಶಾಲೆಗಳು, ಸಾಶಿಇ, ಗಣ್ಯರ ಸಹಕಾರದಲ್ಲಿ ನಡೆಯಲಿದೆ. ಸ್ಪರ್ಧೆಯ ವಿಷಯವು ವನಸಂಪತ್ತು, ವನ್ಯಜೀವಿಗಳ ಬಗ್ಗೆ ಅರಿವು, ಜಾಗೃತಿ ಮೂಡಿಸುವುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್.ಬಡದಾಳ್ (ಮೊ-98440- 24995), ಹಿರಿಯ ಜಾಹೀರಾತು ಪ್ರತಿನಿಧಿ ಟಿ.ಆರ್. ಸುಧೀಂದ್ರ (98449-13226), ಪ್ರಸಾರಾಂಗ ವಿಭಾಗದ ಶಿವರಾಜ (63661-59404) ಅವರನ್ನು ಸಂಪರ್ಕಿಸುವಂತೆ ಕನ್ನಡಪ್ರಭ ಕೋರಿದೆ.

- - -

-16ಕೆಡಿವಿಜಿ9: ದಾವಣಗೆರೆ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಬ್ಯಾನರ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ