ಜಿಲ್ಲಾ ಮಟ್ಟದ ವಿಜ್ಞಾನ, ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ ಸಂಪನ್ನ

KannadaprabhaNewsNetwork |  
Published : May 23, 2025, 12:45 AM IST
22ಪಿಪಿಐಎಂ | Kannada Prabha

ಸಾರಾಂಶ

ಉಡುಪಿಯ ಪೂರ್ಣಪ್ರಜ್ಞ ಸೆಂಟರ್ ಫಾರ್ ಪೊಪ್ಯೂಲರೈಝೇಷನ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕೇಂದ್ರದ ಅಡಿಯಲ್ಲಿ ಇಲ್ಲಿನ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ‘ಜಿಲ್ಲಾ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ - ೨೦೨೫’ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪೂರ್ಣಪ್ರಜ್ಞ ಸೆಂಟರ್ ಫಾರ್ ಪೊಪ್ಯೂಲರೈಝೇಷನ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕೇಂದ್ರದ ಅಡಿಯಲ್ಲಿ ಇಲ್ಲಿನ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ‘ಜಿಲ್ಲಾ ಮಟ್ಟದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಶ್ನೋತ್ತರ ಸ್ಪರ್ಧೆ - ೨೦೨೫’ ನಡೆಯಿತು.ಜಿಲ್ಲೆಯ ವಿವಿಧ ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಚಿಂತನೆ ಮತ್ತು ಶೈಕ್ಷಣಿಕ ಉತ್ಸಾಹವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗಿತ್ತು.

ಪೂರ್ಣಪ್ರಜ್ಞ ಕಾಲೇಜು ಆವರಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯ್ಕೆಯಾದ ೩೦ ಶಾಲೆಗಳಿಂದದ ೧೧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಪ್ರಶ್ನೋತ್ತರ ಸ್ಪರ್ಧೆಯನ್ನು ಲಿಖಿತ ಪರೀಕ್ಷೆ ಮತ್ತು ರಾಪಿಡ್-ಫೈರ್ ಸುತ್ತುಗಳು ಒಳಗೊಂಡಿದ್ದವು.

ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ 10 ಸಾವಿರ ರು, ನಗದು : ಶಿವಾನಿ ಆರ್. ಮತ್ತು ದಿಯಾ (ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್), ದ್ವಿತೀಯ ಸ್ಥಾನ 7 ಸಾವಿರ ರು. ನಗದು : ಪೂರ್ವಿ ಶೆಟ್ಟಿ, ಪೂರ್ವಿಕಾ ವಿ. ಭಟ್, ಗೌರವ್ ಕಾಮತ್ (ಒಳಕಾಡು ಸರ್ಕಾರಿ ಸಂಯುಕ್ತ ಹೈಸ್ಕೂಲ್), ತೃತೀಯ ಸ್ಥಾನ 5 ಸಾವಿರ ರು. ನಗದು : ಕಾವ್ಯಾ, ನವ್ಯ ವಿ. ಶೆಟ್ಟಿ, ಸೃಷ್ಟಿ, ಶ್ರೀನಿಧಿ, ತೃಪ್ತಿ, ಇಶಾ (ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜು) ಗೆದ್ದುಕೊಂಡರು.

ಪೂರ್ಣಪ್ರಜ್ಞ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿರ್ದೇಶಕ ಡಾ. ಪಿ. ಎಸ್. ಐತಾಳ್ ಈ ಸ್ಪರ್ಧೆ ಸಂಯೋಜಿಸಿದರು, ಕಾಲೇಜಿನ ಸಹಪ್ರಾಧ್ಯಾಪಕ ಶಿವಾನಂದ ಭಂಡಾರ್ಕರ್, ವೆಂಕಟೇಶ್ ಶೆಟ್ಟಿ, ದೀಪಕ್ ಶೆಟ್ಟಿ ಹಾಗೂ ಉಪನ್ಯಾಸಕರಾದ ರಾಜೇಶ್ ಮತ್ತು ವೇಣು ಮಾಧವ್ ಸ್ಪರ್ಧೆ ನಡೆಸಿಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ಆಸ್ತಿ, ಹಣ ಪೋಲಾಗದಂತೆ ರಕ್ಷಿಸಿ: ಟಿ.ಶ್ರೀಕಂಠಯ್ಯ
ನನ್ನ ವಿರುದ್ಧ ದರ್ಪದ ಮಾತು ಸಲ್ಲ: ರೇಣುಕಾಚಾರ್ಯ