ನಾಳೆ ಜಿಲ್ಲಾ ಮಟ್ಟದ ಯುವಜನೋತ್ಸವ

KannadaprabhaNewsNetwork |  
Published : Nov 29, 2024, 01:00 AM IST
ಸಿಕೆಬಿ-5 ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ -2024ರ ಕಾರ್ಯಕ್ರಮದ ಪೂರ್ವ ಸಿದ್ದತಾ  ಸಭೆಯಲ್ಲಿ ಜಿಲ್ಲಾಧಿಕಾರಿ ಪಿ .ಎನ್.ರವೀಂದ್ರ ಮಾತನಾಡಿದರು | Kannada Prabha

ಸಾರಾಂಶ

ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತಕಾಲದಲ್ಲಿ ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸುಕೊಳ್ಳುವ ನಿಟ್ಟಿನಲ್ಲಿ ಯುವಜನರಿಗೆ ದೇಶ ಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಯಿವ ಉತ್ಸವ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಷ್ಟ್ರೀಯ ಯುವ ಉತ್ಸವದ ಅಂಗವಾಗಿ ನ.30ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿನ 15ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ತಿಳಿಸುವಂತೆ ಜಿಲ್ಲಾಧಿಕಾರಿ ಪಿ .ಎನ್.ರವೀಂದ್ರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ- 2024ರ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶಭಕ್ತಿ ಮೂಡಿಸುವ ಉದ್ದೇಶ

ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತಕಾಲದಲ್ಲಿ ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸುಕೊಳ್ಳುವ ನಿಟ್ಟಿನಲ್ಲಿ ಯುವಜನರಿಗೆ ದೇಶ ಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿ 15- 29 ವರ್ಷ ವಯೋಮಿತಿ ಹೊಂದಿರುವ ಯುವಜನರ ಪ್ರತಿಭೆಗಳನ್ನು ಪ್ರದರ್ಶಿಸಲು ''''ಯುವಶಕ್ತಿ ಸೇ ಜನ ಭಾಗಿದಾರಿ’ ಎಂಬ ಶೀರ್ಷಿಕೆಯಡಿ ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ -2024 ರ ಕಾರ್ಯಕ್ರಮವನ್ನು ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಕಾರ್ಯಕ್ರಮದ ಭಾಗವಾಗಿ ವಿಜ್ಞಾನ ಮೇಳ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ನವೆಂಬರ್ 30 ರಂದು ಬೆಳಗ್ಗೆ 10- 30 ಗಂಟೆಗೆ ಚಿಕ್ಕಬಳ್ಳಾಪುರ ನಗರದ ಸರ್. ಎಂ.ವಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ನಗದು ಬಹುಮಾನ ನೀಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.

ವಿಜೇತರಿಗೆ ಬಹುಮಾನ

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಬಹುಮಾನ. ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧಿಗಳು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿಬೇಕು. ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಸ್ಪರ್ಧಿಗಳು 15 ರಿಂದ 29 ವರ್ಷದ ಒಳಗಿರಬೇಕು. ಪಕ್ಕವಾದ್ಯ, ರಂಗಸಜ್ಜಿಕೆ, ವೇಷಭೂಷಣ, ವಿಜ್ಞಾನ ಮೇಳ ಇತ್ಯಾದಿ ಸ್ಪರ್ಧೆಗಳಿಗೆ ಪೂರಕ ಉಪಕರಣಗಳನ್ನು ಸ್ಪರ್ಧಿಗಳೇ ಸಿದ್ಧಪಡಿಸಿಕೊಂಡು ಸ್ಪರ್ಧಿಸಬೇಕು ಎಂದು ಮಾಹಿತಿ ನೀಡಿದರು.

ಜಿಪಂ ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಎಸ್.ಮಹೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರೆಡ್ಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಜಿಲ್ಲಾ ಯುವ ಜನ ಅಧಿಕಾರಿ ಕೆ.ರಾಜೇಶ್ ಕಾರಂತ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

----------

ಸಿಕೆಬಿ-5 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಯುವ ಜನೋತ್ಸವ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!