ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಂಟ್ವಾಳ ತಾಲೂಕು ಕಚೇರಿಗೆ ಗುರುವಾರ ರಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದಅವರು, ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಭೂ ಮಂಜೂರಾತಿ ನಂತರ ಸಾರ್ವಜನಿಕರು 1-5 ಮಾಡಲು ಸಲ್ಲಿಸಿರುವ ಸಾಕಷ್ಟು ಅರ್ಜಿಗಳು ಬಾಕಿ ಇದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಆದುದರಿಂದ ಎಲ್ಲಾ ತಾಲೂಕು ಕಚೇರಿಗಳಲ್ಲಿ 1-5 ಪ್ರಕರಣಗಳ ಅರ್ಜಿಗಳನ್ನು ಆದ್ಯತೆಯಲ್ಲಿ ವಿಲೇವಾರಿ ಮಾಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ತಾಲೂಕು ಕಚೇರಿಯ ರೆಕಾರ್ಡ್ ರೂಮ್ಗೆ ಭೇಟಿ ನೀಡಿದ ಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆ ವೀಕ್ಷಿಸಿದರು. ಬಳಿಕ ಸರ್ವೆ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು ಕಡತಗಳ ಸಂಗ್ರಹವನ್ನು ಪರಿಶೀಲಿಸಿದರು.
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರು ದಾಖಲೆಗಳ ಡಿಜಿಟಲೈಝೇಶನ್ ಪ್ರಕ್ರಿಯೆ, 1-5 ಪ್ರಕರಣಗಳ ವಿಲೇವಾರಿ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಿದರು.
ಭೂ ದಾಖಲೆಗಳ ಉಪನಿರ್ದೇಶಕಿ ಪ್ರಸಾದಿನಿ, ಸಹಾಯಕ ನಿರ್ದೇಶಕ ನಿಸಾರ್ ಅಹಮದ್, ಉಪತಹಸೀಲ್ದಾರ್ ನರೇಂದ್ರನಾಥ್ ಭಟ್ ಮತ್ತಿತರರು ಇದ್ದರು.