ಕಡಕೊಳ ಪಪಂಯಲ್ಲಿ ಪೌರಕಾರ್ಮಿಕರ ದಿನಾಚರಣೆ

KannadaprabhaNewsNetwork |  
Published : Sep 26, 2024, 09:45 AM IST
29 | Kannada Prabha

ಸಾರಾಂಶ

ಸಮಾಜದ ಸ್ವಚ್ಛತೆ ಕಾಪಾಡಿ ಸ್ವಾಸ್ಥ್ಯ ಸಮಾಜದ ನಿರ್ಮಾಪಕರು ತಾವುಗಳು ತಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುಲು ತಾವು ಆದ್ಯತೆ ನೀಡಬೇಕು

ಕನ್ನಡಪ್ರಭ ವಾರ್ತೆ ಕಡಕೊಳಕಡಕೊಳ ಪಪಂ ವತಿಯಿಂದ ಪೌರಕಾರ್ಮಿಕರ ದಿನವನ್ನು ಆಚರಿಸಲಾಯಿತು.ನಗರಾಭಿವೃದ್ಧಿ ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕಿ ಬಿ. ಶುಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರಕಾರ್ಮಿಕ ಬಂಧುಗಳು ತಮ್ಮ ದೈನಂದಿನ ಕರ್ತವ್ಯದಲ್ಲಿ ತಂತ್ರಜ್ಞಾನದ ಜೊತೆಗೆ ವೈಚಾರಿಕತೆಯನ್ನು ಅಳವಡಿಸಿಕೊಂಡು ಕೆಲಸ ಮಾಡಿದಾಗ ಜೊತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ತಿಳಿಸಿದರು.ಸಮಾಜದ ಸ್ವಚ್ಛತೆ ಕಾಪಾಡಿ ಸ್ವಾಸ್ಥ್ಯ ಸಮಾಜದ ನಿರ್ಮಾಪಕರು ತಾವುಗಳು ತಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುಲು ತಾವು ಆದ್ಯತೆ ನೀಡಬೇಕು ಜೊತೆಗೆ ತಮ್ಮ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ತಾವು ಮುಂದೆ ಬರಬೇಕೆಂದು ತಿಳಿಸಿದರು. ಪೌರಕಾರ್ಮಿಕರ ಕಲ್ಯಾಣಕ್ಕೆ ಇಲಾಖೆ ಬದ್ಧವಾಗಿದ್ದು, ತಮ್ಮ ಹಿತರಕ್ಷಣೆಗೆ ಕಂಕಣ ಬದ್ಧವಾಗಿದೆ ಎಂದು ತಿಳಿಸಿದರು. ಪಪಂ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪೌರಕಾರ್ಮಿಕ ಬಂಧುಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.

ಪಪಂ ಮುಖ್ಯಾಧಿಕಾರಿ ದೀಪಾ, ಪಪಂ ಸ್ವಚ್ಛತಾ ರಾಯಭಾರಿ ಕಡಕೊಳ ಕುಮಾರಸ್ವಾಮಿ, ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷ ರಾಜು, ಸಮುದಾಯ ಸಂಘಟನಾಧಿಕಾರಿ ಮಹೇಶ್, ಶಂಕರ್, ಆರ್ಐ ವೀಣಾ. ಡಿಇಓ ಶಿವಕುಮಾರ್, ಆರೋಗ್ಯ ನಿರೀಕ್ಷಕ ಮಂಜುನಾಥ್, ಲೆಕ್ಕಿಗರಾದ ಸತೀಶ್ ಹಾಗೂ ಸಿಬ್ಬಂದಿ ವರ್ಗ ಇದ್ದರು.-------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ