ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನ ಆವರಣದಲ್ಲಿ ಮಂಗಳವಾರ ನಡೆದ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
1965 ಏ.2 ರಂದು ಪೊಲೀಸ್ ಕಾಯ್ದೆ ಜಾರಿಗೆ ತರಲಾಗಿದ್ದು, ಆ ದಿನದ ನೆನಪಿಗಾಗಿ ಪೊಲೀಸ್ ಧ್ವಜ ದಿನವನ್ನು ಪ್ರತಿ ವರ್ಷ ಆಚರಿಸುತ್ತಾ ಬರಲಾಗುತ್ತಿದೆ. ಪೊಲೀಸ್ ಕಲ್ಯಾಣ ನಿಧಿಗೆ ಸಹಾಯಧನ ಪಡೆದು ಅದನ್ನು ಪೊಲೀಸರ ಕುಟುಂಬಗಳಿಗೆ ಸದ್ವಿನಿಯೋಗ ಮಾಡಲಾಗುತ್ತಿದೆ ಎಂದರು.ಪೊಲೀಸ್ ಇಲಾಖೆಯಲ್ಲಿ ಪ್ರತಿಯೊಬ್ಬರ ಸೇವೆ ಮಹತ್ವದ್ದಾಗಿದೆ. ದೈನಂದಿನ ಕರ್ತವ್ಯದಲ್ಲಿ ಪೊಲೀಸರು ಶಿಸ್ತು ಹಾಗೂ ಸಂಯಮಕ್ಕೆ ಹೆಸರುವಾಸಿ. ಶೌರ್ಯ, ಸೇವೆ ಒಳಗೊಂಡ ಕಾರ್ಯನಿರ್ವಹಣೆಯಿಂದಾಗಿ ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸರ ಕರ್ತವ್ಯ ಅಪಾರ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ದೊರೆತಾಗ ದೇಶದಲ್ಲಿನ ಆಂತರಿಕ ಹಾಗೂ ಬಾಹ್ಯ ಭದ್ರತೆ ಸಾಮಾನ್ಯವಾಗಿತ್ತು. ನಂತರದ ದಿನಗಳಲ್ಲಿ ಅದು ಅಭಿವೃದ್ಧಿಯಾಗುತ್ತಾ ಸುಭದ್ರ ರಾಷ್ಟ್ರ ಮುನ್ನಡೆಸುವಲ್ಲಿ ಪೊಲೀಸರ ಪಾತ್ರ ಅಪಾರ ಎಂದರು.
ಪೊಲೀಸ್ ಇಲಾಖೆಯ ಸಮವಸ್ತ್ರ ತೊಟ್ಟು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ವಿಫುಲ ಅವಕಾಶ ಇವೆ. ಕಾನೂನು ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜಕ್ಕೆ ನಮ್ಮದೇ ಆದ ಕೊಡುಗೆ ನೀಡೋಣ ಎಂದು ಹೇಳಿದರು.
ಆರ್.ಪಿ.ಐ ಚೆನ್ನನಾಯಕ ನೇತೃತ್ವದಲ್ಲಿ ಅತ್ಯುತ್ತಮವಾಗಿ ಪೊಲೀಸ್ ಪರೇಡ್ ನಡೆಸಲಾಯಿತು. ಜಿಲ್ಲಾ ಸಶಸ್ತ್ರ ಪೊಲೀಸ್ ತಂಡದ ನೇತೃತ್ವವನ್ನು ಮಂಜುನಾಥ್ ವಹಿಸಿದ್ದರು. ಮಡಿಕೇರಿ ಉಪ ವಿಭಾಗದ ತಂಡದ ನೇತೃತ್ವವನ್ನು ರಾಘವೇಂದ್ರ, ವಿರಾಜಪೇಟೆ ಉಪ ವಿಭಾಗದ ಪೊಲೀಸ್ ತಂಡದ ನೇತೃತ್ವವನ್ನು ಶಿವಾನಂದ, ಸೋಮವಾರಪೇಟೆ ಪೊಲೀಸ್ ತಂಡದ ನೇತೃತ್ವ ಮಂಜುನಾಥ್, ಸಂಚಾರಿ ಪೊಲೀಸ್ ತಂಡದ ನೇತೃತ್ವವನ್ನು ಕಾಶಿನಾಥ್, ಜಿಲ್ಲಾ ಮಹಿಳಾ ಪೊಲೀಸ್ ತಂಡದ ನೇತೃತ್ವವನ್ನು ಶೋಭಾ ವಹಿಸಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ, ಕಿರಿಯ ಪೊಲೀಸ್ ಸಿಬ್ಬಂದಿ ಹಾಜರಿದ್ದರು. ಹೆಡ್ಕಾನ್ಸ್ಟೇಬಲ್ಗಳಾದ ಕಾವೇರಮ್ಮ ಹಾಗೂ ಪಾರೂಕ್ ಕಾರ್ಯಕ್ರಮ ನಿರ್ವಹಿಸಿದರು