೧೮ ಮಂದಿ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

KannadaprabhaNewsNetwork |  
Published : Nov 01, 2025, 01:15 AM IST
೩೧ಕೆಎಲ್‌ಆರ್-೧ಕೆ.ವಿ.ಶಂಕರಪ್ಪ. | Kannada Prabha

ಸಾರಾಂಶ

ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರ ಆಯ್ಕೆ ಮಾಡಿದೆ. ಸಮಿತಿಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎನ್.ಬಿ. ಗೋಪಾಲಗೌಡ, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಕೆ.ಆರ್.ತ್ಯಾಗರಾಜ್, ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಡಿ.ಆರ್.ರಾಜಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ವಿಜಯಲಕ್ಷ್ಮಿ ಇದ್ದರು.

ಕನ್ನಡಪ್ರಭ ವಾರ್ತೆ ಕೋಲಾರ೨೦೨೫ರ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕೋಲಾರ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ೧೮ ಮಂದಿ ಸಾಧಕರನ್ನು ಗುರುತಿಸಿ ಕೋಲಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರಕಟಿಸಲಾಗಿದೆ.ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಸಾಧಕರ ಆಯ್ಕೆ ನಡೆಯಿತು. ಪ್ರಶಸ್ತಿ ಆಯ್ಕೆಗೆ ಸಮಿತಿ

ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ. ಗೋಪಾಲಗೌಡ, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಕೆ.ಆರ್.ತ್ಯಾಗರಾಜ್, ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಡಿ.ಆರ್.ರಾಜಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎನ್.ವಿಜಯಲಕ್ಷ್ಮಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಜಿ.ಆರ್.ಶಂಕರೇಗೌಡ ಇದ್ದರು.ನಗರದಲ್ಲಿ ನ.೧ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ:ಸಾಹಿತ್ಯ ಕ್ಷೇತ್ರದಲ್ಲಿ ಕೋಲಾರ ಪಾಲಸಂದ್ರ ಲೇಔಟ್‌ನ ಕಮಲಮ್ಮ ರಾಜು, ಕ್ರೀಡಾ ಕ್ಷೇತ್ರದಲ್ಲಿ ಬೀರಮಾನಹಳ್ಳಿ ಬಿ.ಎಂ.ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದಲ್ಲಿ ಕೋಲಾರದ ಹಿರಿಯ ವಕೀಲ ಕೆ.ವಿ.ಶಂಕರಪ್ಪ, ಕಲಾ ಕ್ಷೇತ್ರದಲ್ಲಿ ಕೋಲಾರ ತಾಲೂಕು ಅಂಕತಟ್ಟಿ ಎಂ.ವೆಂಕಟೇಶಪ್ಪ, ಸಮಾಜ ಸೇವಾ ಕ್ಷೇತ್ರದಲ್ಲಿ ಕೋಲಾರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ.ಚನ್ನಪ್ಪ ಆಯ್ಕೆಯಾಗಿದ್ದಾರೆ.

ಮಾಧ್ಯಮ ವಿಭಾಗ:

ಪತ್ರಿಕೋಧ್ಯಮ ವಿಭಾಗದಲ್ಲಿ ಕೋಲಾರದ ನಾ.ಮಂಜುನಾಥ್, ಕನ್ನಡ ಪರ ಹೋರಾಟಗಾರರ ವಿಭಾಗದಲ್ಲಿ ಮಾಲೂರು ತಾಲೂಕು ನಕ್ಕನಹಳ್ಳಿಯ ವೀರವೆಂಕಟಪ್ಪ, ಸಂಗೀತ ಕ್ಷೇತ್ರದಲ್ಲಿ ಮಾಲೂರು ತಾಲೂಕಿನ ಚಿಕ್ಕತಿರುಪತಿಯ ಎಸ್.ಮಂಜುನಾಥ್, ಸಾಹಿತ್ಯ ವಿಭಾಗದಲ್ಲಿ ಡಾ.ಕುಪ್ಪನಹಳ್ಳಿ ಎಂ.ಬೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಪರ ಹೋರಾಟಗಾರರ ವಿಭಾಗದಲ್ಲಿ ಬಂಗಾರಪೇಟೆಯ ಕೆ.ಎಂ.ವಿ.ಪ್ರಸಾದ್, ಯೋಗ ಮತ್ತು ಸಮಾಜಸೇವಾ ವಿಭಾಗದಲ್ಲಿ ಶ್ರೀನಿವಾಸಪುರದ ಮಾಯಾ ಬಾಲಚಂದ್ರ, ಸಮಾಜಸೇವೆಯಲ್ಲಿ ಆದಿಮ ಅಧ್ಯಕ್ಷ ಎನ್.ಮುನಿಸ್ವಾಮಿ ಮತ್ತು ನಿವೃತ್ತ ಪೊಲೀಸರ ಸಂಘದ ಅಧ್ಯಕ್ಷ ವೆ.ಮು.ಸೊಣ್ಣಪ್ಪ ಆಯ್ಕೆಯಾಗಿದ್ದಾಗೆ.

ಶಿಕ್ಷಣ- ಆಯುರ್ವೇದ ಕ್ಷೇತ್ರ

ಆಯುರ್ವೇದ ಕ್ಷೇತ್ರದಲ್ಲಿ ಮುಳಬಾಗಿಲು ಹರೀಶ್ ಬಾಬು, ಶಿಕ್ಷಣ ಕ್ಷೇತ್ರದಲ್ಲಿ ಮುಳಬಾಗಿಲು ಶಾರದಾ ವಿದ್ಯಾ ಪೀಠದ ಟಿ.ಎಸ್.ರಮೇಶ್, ಕನ್ನಡ ಪರ ಹೋರಾಟಗಾರರ ವಿಭಾಗದಲ್ಲಿ ಕೆಜಿಎಫ್ ನ ಕೆ.ಲಕ್ಷ್ಮಣ ಕುಮಾರ್, ಗಮಕ ಕ್ಷೇತ್ರದಲ್ಲಿ ಬೇತಮಂಗಲ ಆರ್.ವೆಂಕಟರವಣಪ್ಪ ಮತ್ತು ಕೃಷಿ ಕ್ಷೇತ್ರದಲ್ಲಿ ಮಾಲೂರು ತಾಲೂಕು ನೀಲಕಂಠ ಅಗ್ರಹಾರದ ಬಿಳಿ ರಾಗಿ ಶಾಮಣ್ಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

PREV

Recommended Stories

ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!