ನೈಸರ್ಗಿಕ ಪ್ರವಾಸೋದ್ಯಮಕ್ಕೆ ಜಿಲ್ಲೆ ಕೊಡುಗೆ ಅಪಾರ: ಎಂ.ಜಿ. ಹೆಬ್ಬಾರ

KannadaprabhaNewsNetwork |  
Published : Mar 19, 2024, 12:53 AM IST
ಫೋಟೋ ಮಾ.೧೮ ವೈ.ಎಲ್.ಪಿ. ೦೧ | Kannada Prabha

ಸಾರಾಂಶ

ಪ್ರವಾಸಿಗರಿಗೆ ನಮ್ಮ ಜಿಲ್ಲೆಯ ವಿವಿಧ ಪ್ರದೇಶದ ಸೌಂದರ್ಯ ಮತ್ತು ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ರಿಯಾಯಿತಿ ದರವನ್ನು ನಿಗದಿಗೊಳಿಸಲಾಗಿದೆ.

ಯಲ್ಲಾಪುರ: ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆ ನೈಸರ್ಗಿಕ ಪ್ರವಾಸೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದೆ. ಇಲ್ಲಿನ ವಿಶಿಷ್ಟವಾದ ಸಾಂಪ್ರದಾಯಿಕ ಆಹಾರ ಕ್ರಮವೂ ಅಷ್ಟೇ ವಿಶಿಷ್ಟವಾಗಿದೆ. ಅದನ್ನು ಹೊರಜಗತ್ತಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಬನಾನಾ ಕೌಂಟಿ ರೆಸಾರ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ಹೆಬ್ಬಾರ ತಿಳಿಸಿದರು.

ತಾಲೂಕಿನ ಚಂದಗುಳಿ ಗ್ರಾಪಂ ವ್ಯಾಪ್ತಿಯ ಬಿಲ್ಲಿಗದ್ದೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೆಸಾರ್ಟ್ ಪರಿಕಲ್ಪನೆಯೇ ಇರದ ಸುಮಾರು ೨೦ ವರ್ಷಗಳ ಹಿಂದೆಯೇ ಪ್ರವಾಸಿಗರಿಗೆ ಹೊಸತನ್ನು ನೀಡಬೇಕೆಂಬ ಮಹತ್ವಾಕಾಂಕ್ಷೆಯಿಂದ ೨೧ ಎಕರೆ ಸ್ಥಳ ಖರೀದಿಸಿ, ತಾಲೂಕಿನ ಬಿಲ್ಲಿಗದ್ದೆಯಲ್ಲಿ ಪ್ರಾರಂಭಿಸಿದ ನಮ್ಮ ಬನಾನಾ ಕೌಂಟಿ ರೆಸಾರ್ಟ್ ಇದೀಗ ಯಶಸ್ವಿಯಾಗಿ ಪ್ರವಾಸಿಗರ ಆಶಯಕ್ಕನುಗುಣವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಪ್ರವಾಸಿಗರಿಗೆ ಜಿಲ್ಲೆಯ ಅದರಲ್ಲೂ ಹವ್ಯಕರ ಅಡುಗೆ ತಿಂಡಿ, ತಿನಿಸು ನೀಡಿ, ನಮ್ಮ ಈ ಪರಿಸರದ ಮಹತ್ವದ ಆಹಾರ- ವಿಹಾರಗಳ ಪರಿಚಯವನ್ನು ಹೊರ ಜಗತ್ತಿಗೆ ಪರಿಚಯಿಸಿದಾಗ ಮಾತ್ರ ಜಿಲ್ಲೆಯ ಸತ್ವ, ಮಹತ್ವ ಜನರಿಗೆ ಅರಿವಾಗುತ್ತದೆ. ಪ್ರವಾಸಿಗರಿಗೆ ನಮ್ಮ ಜಿಲ್ಲೆಯ ವಿವಿಧ ಪ್ರದೇಶದ ಸೌಂದರ್ಯ ಮತ್ತು ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ರಿಯಾಯಿತಿ ದರವನ್ನು ನಿಗದಿಗೊಳಿಸಲಾಗಿದೆ. ಇದೀಗ ಶೇ. ೪೦ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಪ್ರವಾಸಿಗರು ತಮಗೆ ಬೇಕಾಗುವ ಪ್ಯಾಕೇಜ್ ಅಡಿ ತಮ್ಮ ಬೇಡಿಕೆಯನ್ನು ಮೊದಲೇ ಕಾದಿರಿಸಬೇಕಾಗುತ್ತದೆ ಎಂದರು.

ಹಿರಿಯ ಪತ್ರಕರ್ತ ರಾಜು ಅಡಕಳ್ಳಿ ಮಾತನಾಡಿ, ೨೦ ವರ್ಷಗಳ ಹಿಂದೆಯೇ ಬನಾನಾ ಕೌಂಟಿಯಲ್ಲಿ ಆರಂಭಿಸಿದ ಪರಿಸರಸ್ನೇಹಿ ಪ್ರವಾಸೋದ್ಯಮ ಜೀವನಾನುಭವದ ಹಿನ್ನೆಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬನಾನಾ ಕೌಂಟಿಯ ನಿರ್ದೇಶಕ ಪೃಥ್ವಿರಾಜ ಹೆಬ್ಬಾರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್‌ ಸಿಗದಿರುವುದಕ್ಕೆ ಸರ್ಕಾರದವಿರುದ್ಧ ಆಟೋ ಚಾಲಕರ ಆಕ್ರೋಶ
ಏಕ ಬಳಕೆ ಪ್ಲಾಸ್ಟಿಕ್ ಬಳಸಿದರೆ 5 ಲಕ್ಷ ದಂಡ : ಜಿಬಿಎ ಎಚ್ಚರಿಕೆ