ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಕಚೇರಿಗೆ ಇತ್ತೀಚೆಗೆ ಭೇಟಿ ನೀಡಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಪರಿಶೀಲಿಸಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಚೇರಿ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶತಮಾನೋತ್ಸವ ಭವನ ನಿರ್ಮಾಣಕ್ಕೆ ರಾಜ್ಯ ಸಂಸ್ಥೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸೂಕ್ತ ಅನುದಾನ ಪಡೆದು ಸ್ಕೌಟ್ಸ್ ಮತ್ತು ಗೈಡ್ಸ್ನ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸ್ಕೌಟ್ಸ್ ರಾಜ್ಯ ಸಂಸ್ಥೆಯ ವತಿಯಿಂದ ಸಹಕರಿಸಲಾಗುವುದು ಎಂದರು.ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಂಸ್ಥೆಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ನೇತೃತ್ವದಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಡಳಿತದ ಸಹಕಾರ ಪಡೆಯಲು ಮುಂದಿನ ದಿನಗಳಲ್ಲಿ ಸಭೆ ನಡೆಸಿ ಕಟ್ಟಡ ನಿರ್ಮಾಣಕ್ಕೆ ಯೋಜನೆ ಸಿದ್ಧತೆ ನಡೆಸಲಾಗುವುದು ಎಂದು ಮಹೇಶ್ ತಿಳಿಸಿದರು.
ಜಿಲ್ಲೆಯಲ್ಲಿ ಸ್ಕೌಟ್ಸ್ , ಗೈಡ್ಸ್ ವತಿಯಿಂದ ವಾರ್ಷಿಕವಾಗಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ..ಟಿ. ಬೇಬಿ ಮ್ಯಾಥ್ಯೂ,
ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು. ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜೀರ ಅಯ್ಯಪ್ಪ, ಸ್ಥಾನಿಕ ಆಯುಕ್ತ ಎಚ್.ಆರ್. ಮುತ್ತಪ್ಪ, ಗೈಡ್ಸ್ ಸಹಾಯಕ ಆಯುಕ್ತ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಸಂಸ್ಥೆಯ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ, ಬುಲ್ ಬುಲ್ ಘಟಕದ ಮುಖ್ಯಸ್ಥೆ ಡೈಸಿ, ಗೈಡ್ಸ್ ಕ್ಯಾಪ್ಟನ್ ಗಹನ ಇತರರು ಇದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಾಗದಲ್ಲಿ ನಿರ್ಮಿಸಲುದ್ದೇಶಿರುವ ಸ್ಕೌಟ್ಸ್ ಶತಮಾನೋತ್ಸವ ಭವನದ ಸ್ಥಳವನ್ನು ಎ.ಎನ್. ಮಹೇಶ್ ಪರಿಶೀಲಿಸಿದರು.