ಶೇ.100 ಮತದಾನಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಸಜ್ಜು

KannadaprabhaNewsNetwork |  
Published : Mar 25, 2026, 03:45 AM IST
ಕ್ಯಾಪ್ಷನ24ಕೆಡಿವಿಜಿ38, 39 ದಾವಣಗೆರೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಜುಂಬಾ ಡ್ಯಾನ್ಸ್ ಗೆ ಜಿಪಂ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಚಾಲನೆ ನೀಡಿ ಮಾತನಾಡಿದರು. | Kannada Prabha

ಸಾರಾಂಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲರಾವ್ ಹೇಳಿದ್ದಾರೆ.

- ಹೈಸ್ಕೂಲ್ ಮೈದಾನದಲ್ಲಿ ಜುಂಬಾ ಡ್ಯಾನ್ಸ್‌ಗೆ ಚಾಲನೆ ನೀಡಿ ಜಿಪಂ ಸಿಇಒ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲರಾವ್ ಹೇಳಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಜುಂಬಾ ಡ್ಯಾನ್ಸ್‌ಗೆ ಚಾಲನೆ ನೀಡಿ ಮಾತನಾಡಿದರು. ಮತದಾರರಲ್ಲಿ ಅರಿವು ಮೂಡಿಸುವ ಮೂಲಕ ಈ ಬಾರಿ ದಾಖಲೆ ಪ್ರಮಾಣದ ಮತದಾನ ಮಾಡಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ ಎಂದರು.

ಮತದಾರರನ್ನು ಪ್ರೇರೇಪಿಸಲು ಸಮಿತಿಯು ಪ್ರತಿದಿನ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಪ್ರಮುಖವಾಗಿ ಈಗಾಗಲೇ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮತ್ತು ಜನಜಾಗೃತಿ ಜಾಥಾಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.

ಗ್ರಾಮೀಣ ಭಾಗದ 8 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಆದರೆ, ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ, ನಗರ ವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ, ಪ್ರತಿಯೊಬ್ಬ ಮತದಾರರೂ ಮತದಾನ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಬೇಕು. ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಅಡಿಯಲ್ಲಿ ನಾವು ಪ್ರತಿಯೊಬ್ಬರಿಗೂ ತಲುಪಲು ಪ್ರಯತ್ನಿಸುತ್ತಿದ್ದೇವೆ. ಮತದಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯವಾಗಿದ್ದು, ಏಪ್ರಿಲ್ 9ರಂದು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸೋಣ ಎಂದರು.

ವಿದ್ಯಾರ್ಥಿಗಳು ಮತ್ತು ಅಧಿಕಾರಿ ಸಿಬ್ಬಂದಿ "ಸ್ವೀಪ್ ಡಿವಿಜಿ 9 ಏಪ್ರಿಲ್ " ಎಂಬ ಅಕ್ಷರಗಳ ಆಕಾರವನ್ನು ನಿರ್ಮಿಸುವ ಮೂಲಕ ಮತದಾರರಲ್ಲಿ ಅರಿವು ಮೂಡಿಸಿದರು. ಈ ಆಕರ್ಷಕ ದೃಶ್ಯವನ್ನು ಡ್ರೋನ್ ಕ್ಯಾಮರಾದ ಮೂಲಕ ಸೆರೆಹಿಡಿಯಲಾಗಿದ್ದು ಗಮನ ಸೆಳೆಯಿತು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಗೌಡರ್, ಮುಖ್ಯ ಯೋಜನಾ ನಿರ್ದೇಶಕ ಮಲ್ಲಾ ನಾಯಕ್, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- - -

-24ಕೆಡಿವಿಜಿ38, 39:

ದಾವಣಗೆರೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಜುಂಬಾ ಡ್ಯಾನ್ಸ್ ಗೆ ಜಿಪಂ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಚಾಲನೆ ನೀಡಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿ ಶೂನ್ಯ ದಕ್ಷಿಣದಲ್ಲಿ ಬಿಜೆಪಿ ಗೆಲ್ಲುತ್ತೆ: ರಘು ಕೌಟಿಲ್ಯ
ಜಗಜೀವನ್ ರಾಂ, ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್