ಕನ್ನಡಪ್ರಭ ವಾರ್ತೆ ಭದ್ರಾವತಿ
ವಿಶ್ವ ಹಿಂದೂ ಪರಿಷತ್ ಹಾಗೂ ವಿಶ್ವಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ನಗರದ ಸಿದ್ಧಾರೂಡನಗರದ ಕಾಳಿದಾಸ ಬಡಾವಣೆಯಲ್ಲಿರುವ ಧರ್ಮಶ್ರೀ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ೪೦ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.ವಿಶ್ವ ಹಿಂದೂ ಪರಿಷತ್ ಉಚಿತ ಸಾಮೂಹಿಕ ವಿವಾಹಗಳ ಕಳೆದ ೪೦ ವರ್ಷದಿಂದ ನಿರಂತರ ಆಯೋಜಿಸುತ್ತಿದ್ದು, ಈ ಮೂಲಕ ಹಿಂದೂ ಧರ್ಮದ ಆಚರಣೆಗಳ ಎತ್ತಿ ಹಿಡಿಯುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸರ್ವ ಧರ್ಮ, ಜಾತಿ, ಜನಾಂಗದ ಆಶೀರ್ವಾದ ಲಭ್ಯ:ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ಬಿ.ಕೆ.ಜಗನ್ನಾಥ್, ಕುಟುಂಬಗಳು ಕೂಡಿ ನಡೆಸುವ ವಿವಾಹಗಳಿಗಿಂತ ಸಾಮೂಹಿಕ ವಿವಾಹಗಳು ಹೆಚ್ಚು ಶಕ್ತಿಶಾಲಿಯಾದ್ದು. ಸಾಮೂಹಿಕ ವಿವಾಹಗಳಿಂದ ಸರ್ವ ಧರ್ಮ ಮತ್ತು ಸರ್ವ ಜಾತಿ, ಜನಾಂಗದವರ ಆರ್ಶೀರ್ವಾದ ಲಭಿಸುತ್ತದೆ. ಆದ್ದರಿಂದ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಸಬೇಕಾದ ಅಗತ್ಯವಿದೆ. ಸಾಮೂಹಿಕ ವಿವಾಹಗಳು ಬಡವರು- ಶ್ರೀಮಂತರು ಎಂಬ ತಾರತಮ್ಯವಿಲ್ಲದೆ ಎಲ್ಲರೂ ಸಾಮೂಹಿಕ ವಿವಾಹಗಳಿಗೆ ಆದ್ಯತೆ ನೀಡುವುದರಿಂದ ಸಮಾಜದಲ್ಲಿ ಪರಸ್ಪರ ಅನ್ಯೋನ್ಯತೆ ಮೂಡಲು ಸಾಧ್ಯ ಎಂದರು.
ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ, ಸಮಾಜ ಸೇವಕ ವೆಂಕಟರಮಣ ಶೇಟ್ ಅಧ್ಯಕ್ಷತೆ ವಹಿಸಿದ್ದರು. ಉಚಿತ ಸಾಮೂಹಿಕ ವಿವಾಹ ಸಮಿತಿ ಸಲಹೆಗಾರ ಡಾ. ಬಿ.ಜಿ ಧನಂಜಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪರಿಷತ್ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಹಾ. ರಾಮಪ್ಪ ನಿರೂಪಿಸಿದರು.
ಎರಡು ಜೊತೆ ಸಾಮೂಹಿಕ ವಿವಾಹದಲ್ಲಿ ಡಾ. ಆರ್. ಅಮೂಲ್ಯ ಮತ್ತು ಸಿ.ಎಂ.ಅಭಿಷೇಕ್ ಹಾಗೂ ಎ.ಅಶ್ವಿತಾ ಮತ್ತು ಆರ್. ರವಿಕುಮಾರ್ ನೂತನ ಸತಿ-ಪತಿಗಳಾಗಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಸರ್ಕಾರಿ ಶಾಲೆ ಹಾಗೂ ಕಾಲೇಜಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ಕನ್ನಡ ಭಾಷೆಯಲ್ಲಿ ೧೨೫ಕ್ಕೆ ೧೨೫ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ಸಾಮೂಹಿಕ ವಿವಾಹಕ್ಕೆ ಸಹಕರಿಸಿದ ದಾನಿಗಳು, ಗಣ್ಯರ ಸನ್ಮಾನಿಸಿ ಗೌರವಿಸಲಾಯಿತು.
ಸತಿ ಮತ್ತು ಪತಿ ಇಬ್ಬರು ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಜೀವನ ಸಾಗಿಸಬೇಕು. ದಂಪತಿ ಆಯ್ಕೆಯಲ್ಲಿ ಸಂಸ್ಕಾರಕ್ಕಿಂತ ಹಣ-ಅಂತಸ್ತು ಪ್ರಮುಖ ಪಾತ್ರವಹಿಸುತ್ತಿದೆ. ಅನೇಕ ದಾಂಪತ್ಯ ಕೆಲವೇ ವರ್ಷಗಳಲ್ಲಿ ಮುರಿದು ಬೀಳುತ್ತಿರುವುದರಿಂದ ಲಕ್ಷಾಂತರ ರುಪಾಯಿ ವೆಚ್ಚ ಮಾಡುವ ಪೋಷಕರಿಗೂ ನೆಮ್ಮದಿ ಇರುವುದಿಲ್ಲ. ದಂಪತಿಗೂ ನೆಮ್ಮದಿ ಇರುವುದಿಲ್ಲ. ಆದ್ದರಿಂದ ಸಂಸ್ಕಾರಕ್ಕೆ ಆದ್ಯತೆ ಹೆಚ್ಚಾಗಬೇಕು.