ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ

KannadaprabhaNewsNetwork |  
Published : Nov 01, 2024, 12:12 AM IST
  ಕನ್ನಡಪ್ರಭ ವಾರ್ತೆ  ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯುತ್ತಿರುವ    5 . ದಿನಗಳ ದೀಪಾವಳಿ .ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನಿಗೆ ಬೆಳಗಿನ ಜಾವ.ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ  ಜಲಾಭಿಷೇಕ.ಪಂಚಾಮೃತ ಅಭಿಷೇಕ ಗಂಧದ ಅಭಿಷೇಕ  ಬಿಲ್ವಾರ್ಚನೆ ಸೇವೆ  ವಿಶೇಷವಾಗಿ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿಯೊಂದಿಗೆ ಪೂಜೆ ಧಾರ್ಮಿಕವಾಗಿ ನಡೆಯಿತು . ನರಕ ಚತುರ್ಥಿ  ಉತ್ಸವಗಳು : ಹರಕೆ ಹೊತ್ತ ಮಾದಪ್ಪನ ಭಕ್ತರಿಂದ ಮಲೆ ಮಾದೇಶ್ವರನ ಬೆಟ್ಟದಲ್ಲಿ ನಡೆಯುವ ರುದ್ರಾಕ್ಷಿ ಮಂಟಪೋತ್ಸವ ಬಸವನ ಉತ್ಸವ ಹುಲಿ ವಾಹನ ಉತ್ಸವ ಹಾಗೂ ಬೆಳ್ಳಿಯ ತೇರು ಉತ್ಸವ ಮತ್ತು ಚಿನ್ನದ ತೇರಿನ ಉತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಮಾದಪ್ಪನ ಭಕ್ತರು ಮಾದಪ್ಪನ ದೇವಾಲಯದ ಆವರಣದಲ್ಲಿ ಚಪ್ಪರ ಮಳಿಗೆ ಉತ್ಸವ ಮಾದೇಶ್ವರ ಉತ್ಸವ ಮೂರ್ತಿಗೆ ಭಕ್ತರಿಂದ ಅಭಿಷೇಕ ಮಾಡುವ ಪಲ್ಲಕ್ಕಿ ಉತ್ಸವ .ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದೊಂದಿಗೆ ನಡೆಯಿತು  ವಿಶೇಷ ದಾಸೋಹ : ಮಲೆ ಮಹದೇಶ್ವರನ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಹಬ್ಬದ ಐದು ದಿನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ಮತ್ತು ತಮಿಳುನಾಡಿನಿಂದ ಸಹ ಬರುವ ಮಾದಪ್ಪನ ಭಕ್ತರ ಅನುಕೂಲಕ್ಕಾಗಿ ದಾಸೋಹ ನಿರಂತರ ದಾಸಹವನ್ನು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ವ್ಯವಸ್ಥೆ ಕಲ್ಪಿಸಿತು ಜೊತೆಗೆ ಪ್ರತ್ಯೇಕವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರೆಗೆ ಬಂದಿರುವ ಪೊಲೀಸ್ ಇಲಾಖೆ ಮತ್ತು ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳಿಗೂ ಸಹ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭಕ್ತರಿಗೂ ಸಹ ವಿಶೇಷ ದಾಸೋಹವನ್ನು ವ್ಯವಸ್ಥೆ ಮಾಡಲಾಗಿತ್ತು   ವಿಶೇಷ ಸೇವೆಗಳು : ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತರಿಂದ ದಾಸೋಹ ಸೇವೆ ಮುಡಿಸೇವೆ ಪಂಜಿನ ಸೇವೆ ಉರುಳು ಸೇವೆ ಮತ್ತು ವಿಶೇಷ ಸೇವೆಗಳೊಂದಿಗೆ ಬೇಡ ಕೆಂಪಣ್ಣ ಸಮುದಾಯದ ಅರ್ಚಕರಿಂದ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ಜರುಗಿದವು   ಭಕ್ತರ ದಂಡು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನ ಭಾಗಗಳಿಂದ ಕರ್ನಾಟಕ ರಾಜ್ಯ ಸಾರಿಗೆ ಸೇರಿದಂತೆ ವಿಶೇಷ ವಾಹನಗಳಲ್ಲಿ ಬಂದಿಳಿದಿರುವ ಭಕ್ತ ಸಮೂಹ ಮಾದಪ್ಪನ ಬೆಟ್ಟದಲ್ಲಿರುವ ವಸತಿ ನಿಲಯಗಳಲ್ಲಿ ಸಹ ತುಂಬಿ ತುಳುಕಿದ್ದು ದೇವಾಲಯದ ಮುಂಭಾಗ ಇರುವ ಡಾಮೆಂಟರಿಲ್ಲಿಯೂ ಸಹ ವಾಸ್ತವ್ಯ ಮಾಡುವ ಮೂಲಕ ಭಕ್ತರ ದಂಡೆ ಹರಿದು ಬರುತ್ತಿದೆ . ಮಲೆ ಮಾದೇಶ್ವರ ಬೆಟ್ಟದಲ್ಲಿ ಎತ್ತ ನೋಡಿದರು ಜನಸಾಗರವೇ ಕಂಡು ಬಂದಿದೆ......ಭದ್ರತೆ : ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಹಬ್ಬದ ಜಾತ್ರೆ ಮಹೋತ್ಸವದ ಅಂಗವಾಗಿ ಪೊಲೀಸ್ ಇಲಾಖೆ ಹೆಚ್ಚಿನ ಪೊಲೀಸರನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದ ಯೋಜನೆ ಮಾಡುವ ಮೂಲಕ ದೇವಾಲಯ ಮುಂಭಾಗ ಹಾಗೂ ಬಸ್ ನಿಲ್ದಾಣ ಮತ್ತು ದಾಸೋಹ ವ್ಯವಸ್ಥೆ ನಡೆಯುವ ಸ್ಥಳ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಕಲ್ಪಿಸಿದೆ   ಹಾಲರುವೆ ಉತ್ಸವ : ದೀಪಾವಳಿ ಜಾತ್ರೆ ವಿಶೇಷ ಅಂಗವಾಗಿ ನಡೆಯುವ ಐದು ದಿನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ  ಅಮಾವಾಸ್ಯೆ ಪೂಜೆ ಉತ್ಸವ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಹಾಲು ಹಳ್ಳದಿಂದ ಜಲತಂದು ಮಾದೇಶ್ವರನಿಗೆ ಅಭಿಷೇಕ ಮಾಡುವ ಪೂಜಾ ಕಾರ್ಯಕ್ರಮಕ್ಕೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ನಾಳೆ ನಡೆಯಲಿದೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಯು ಸಹ ನಡೆದಿದೆ....ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತಾದಿಗಳೆ ಅನುಕೂಲಕ್ಕಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ನಾಳೆ ಅಮಾವಾಸ್ಯೆ ವಿಶೇಷ ಪೂಜೆ ಹಾಲುರುವೆ ಪೂಜಾ ಕಾರ್ಯಕ್ರಮ ಕೆ ಸಕಲ ಸಿದ್ಧತೆಗಳೊಂದಿಗೆ ಕ್ರಮ ವಹಿಸಲಾಗಿದೆ ಜೊತೆಗೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ವಿಶೇಷ ತಾಸು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಲಾಗಿದೆ ಹಿರಿಯ ನಾಗರಿಕರಿಗೆ ದೇವರ ದರ್ಶನ ಮಾಡಲು ವಿಶೇಷ ಸರದಿ ಸಾಲಿನ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ...ಎ., ಇ, , ರಘು ಕಾರ್ಯದರ್ಶಿಗಳುಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಲೆ ಮಹದೇಶ್ವರ ಬೆಟ್ಟ.......Hnr,1news,1 ಹನೂರು ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ನಡೆದ ಚಿನ್ನದ ರಥೋತ್ಸವ ವೇಳೆ ನೆರೆದಿದ್ದ ಬಾರಿ ಭಕ್ತ ಸಮೂಹ....Hnr,2news,1  ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಬರುವ ಪಕ್ಷಾದಿಗಳಿಗೆ ವಿಶೇಷ ದಾಸೋಹ ವ್ಯವಸ್ಥೆ ಎನ್ನು ಪರಿಶೀಲನೆ ನಡೆಸಿದ ಕಾರ್ಯದರ್ಶಿ ಎ. ಇ ರಘುHnr,3news,1  ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ  ದೀಪಾವಳಿ ಜಾತ್ರೆ ಮಹೋತ್ಸವಕ್ಕೆ ಭಾಗವಹಿಸಿದ್ದ ಭಕ್ತಾದಿಗಳು ಉರುಳು ಸೇವೆ ನಡೆಸಿ ಇಷ್ಟಾರ್ಥ ಸಿದ್ಧಿಸುವಂತೆ ಮಾದೇಶ್ವರನಲ್ಲಿ ನಿವೇದನೆ ಮಾಡಿಕೊಂಡರು....Hnr,4news,1  ಹನೂರು ಮಲೆ ಮಹದೇಶ್ವರ ಬೆಟ್ಟ ದೀಪಾವಳಿ ಜಾತ್ರೆ ಮಹೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳು ದಾಸೋಹ ಭವನದಲ್ಲಿ ದಾಸೋಹ ಸವಿಯುತ್ತಿರುವ ಚಿತ್ರಣ.....Hnr,5news,1  ಹನೂರು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ ಇ ರಘು | Kannada Prabha

ಸಾರಾಂಶ

ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಸಾಲೂರು ಬೃಹನ್‌ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು.

ಐದು ದಿನ ನಡೆಯುವ ಉತ್ಸವ । ಸಾಲೂರು ಬೃಹನ್‌ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಪೂಜೆ । ವಿಶೇಷ ದಾಸೋಹ

ಕನ್ನಡಪ್ರಭ ವಾರ್ತೆ ಹನೂರು

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಸಾಲೂರು ಬೃಹನ್‌ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯುತ್ತಿರುವ 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನಿಗೆ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಗಂಧದ ಅಭಿಷೇಕ, ಬಿಲ್ವಾರ್ಚನೆ ಸೇವೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿಯೊಂದಿಗೆ ಪೂಜೆ ಧಾರ್ಮಿಕವಾಗಿ ನಡೆಯಿತು.

ನರಕ ಚತುರ್ಥಿ ಉತ್ಸವಗಳು:

ಹರಕೆ ಹೊತ್ತ ಮಾದಪ್ಪನ ಭಕ್ತರಿಂದ ಮಲೆ ಮಾದೇಶ್ವರನ ಬೆಟ್ಟದಲ್ಲಿ ನಡೆಯುವ ರುದ್ರಾಕ್ಷಿ ಮಂಟಪೋತ್ಸವ, ಬಸವನ ಉತ್ಸವ, ಹುಲಿ ವಾಹನ ಉತ್ಸವ ಹಾಗೂ ಬೆಳ್ಳಿಯ ತೇರು ಉತ್ಸವ ಮತ್ತು ಚಿನ್ನದ ತೇರಿನ ಉತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಮಾದಪ್ಪನ ಭಕ್ತರು ಮಾದಪ್ಪನ ದೇವಾಲಯದ ಆವರಣದಲ್ಲಿ ಚಪ್ಪರ ಮಳಿಗೆ ಉತ್ಸವ ಮಾದೇಶ್ವರ ಉತ್ಸವ ಮೂರ್ತಿಗೆ ಭಕ್ತರಿಂದ ಅಭಿಷೇಕ ಮಾಡುವ ಪಲ್ಲಕ್ಕಿ ಉತ್ಸವ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದೊಂದಿಗೆ ನಡೆದವು.

ವಿಶೇಷ ದಾಸೋಹ:

ಮಲೆ ಮಹದೇಶ್ವರನ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಹಬ್ಬದ ಐದು ದಿನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನಾ ಭಾಗಗಳು, ವಿವಿಧ ಜಿಲ್ಲೆಗಳಿಂದ ಮತ್ತು ತಮಿಳುನಾಡಿನಿಂದ ಸಹ ಬರುವ ಮಾದಪ್ಪನ ಭಕ್ತರ ಅನುಕೂಲಕ್ಕಾಗಿ ದಾಸೋಹ ನಿರಂತರ ದಾಸೋಹವನ್ನು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ವ್ಯವಸ್ಥೆ ಕಲ್ಪಿಸಿದೆ. ಜತೆಗೆ ಪ್ರತ್ಯೇಕವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರೆಗೆ ಬಂದಿರುವ ಪೊಲೀಸ್ ಇಲಾಖೆ ಮತ್ತು ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭಕ್ತರಿಗೂ ಸಹ ವಿಶೇಷ ದಾಸೋಹವನ್ನು ವ್ಯವಸ್ಥೆ ಮಾಡಲಾಗಿತ್ತು .

ವಿಶೇಷ ಸೇವೆಗಳು:

ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತರಿಂದ ದಾಸೋಹ ಸೇವೆ ಮುಡಿಸೇವೆ, ಪಂಜಿನ ಸೇವೆ, ಉರುಳು ಸೇವೆ ಮತ್ತು ವಿಶೇಷ ಸೇವೆಗಳೊಂದಿಗೆ ಬೇಡಗಂಪಣ್ಣ ಸಮುದಾಯದ ಅರ್ಚಕರಿಂದ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ಜರುಗಿದವು.

ಹಾಲರುವೆ ಉತ್ಸವ:

ದೀಪಾವಳಿ ಜಾತ್ರೆ ವಿಶೇಷ ಅಂಗವಾಗಿ ನಡೆಯುವ ಐದು ದಿನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಅಮಾವಾಸ್ಯೆ ಪೂಜೆ ಉತ್ಸವ ಬೇಡಗಂಪಣ ಸಮುದಾಯದ ಹೆಣ್ಣುಮಕ್ಕಳು ಹಾಲು ಹಳ್ಳದಿಂದ ಜಲತಂದು ಮಾದೇಶ್ವರನಿಗೆ ಅಭಿಷೇಕ ಮಾಡುವ ಪೂಜಾ ಕಾರ್ಯಕ್ರಮಕ್ಕೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಶನಿವಾರ ನಡೆಯಲಿದೆ.

ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ನೀರಿನ ವ್ಯವಸ್ಥೆ ಮತ್ತು ವಿಶೇಷ ತಾಸು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.

ಎಇ. ರಘು, ಕಾರ್ಯದರ್ಶಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಮಲೆ ಮಹದೇಶ್ವರ ಬೆಟ್ಟ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ