80 ಡೆಸಿಬಲ್‌ ಮೀರಿದರೆ ಡಿಜೆ ಬಾಕ್ಸ್‌ ವಶ, ಪ್ರಕರಣ ದಾಖಲು

KannadaprabhaNewsNetwork |  
Published : Sep 11, 2026, 02:30 AM IST
ಕಮಿಷನರ್‌ ಭೂಷಣ್ ಬೊರಸೆ | Kannada Prabha

ಸಾರಾಂಶ

ದೇಶದ ವಿವಿಧೆಡೆ ಡಿಜೆ ಸೌಂಡ್‌ನಿಂದ ಸಂಭವಿಸಿರುವ ಅನಾಹುತಗಳ ಕುರಿತು ಮಾಧ್ಯಮ ವರದಿಗಳ ಆಧಾರದಲ್ಲಿ ಮಾಹಿತಿ ನೀಡಿದರು. ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳನ್ನು ಪಾಲಿಸಬೇಕು.

ಹುಬ್ಬಳ್ಳಿ:

ಗಣೇಶೋತ್ಸವದಲ್ಲಿ ಡಿಜೆ ಸೌಂಡ್‌ಗೆ ಸಮಯದ ಕಡಿವಾಣ ಹಾಕಿರುವ ಹು-ಧಾ ಪೊಲೀಸರು, ರಾತ್ರಿ 10ರ ಬಳಿಕ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದಲ್ಲಿ ಡಿಜೆ ಬಳಸಿದರೆ ಉಪಕರಣಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸುವುದಾಗಿ ಮಹಾನಗರ ಪೊಲೀಸ್‌ ಆಯುಕ್ತ ಭೂಷಣ್ ಬೊರಸೆ ಎಚ್ಚರಿಕೆ ನೀಡಿದ್ದಾರೆ.

ಗಣೇಶೋತ್ಸವದ ಹಿನ್ನೆಲೆಯಲ್ಲಿ ಡಿಜೆ ಬಳಕೆಗೆ ಸಂಬಂಧಿಸಿದಂತೆ ಇಲ್ಲಿನ ನವನಗರದಲ್ಲಿರುವ ಹು-ಧಾ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಬುಧವಾರ ಪೊಲೀಸ್‌ ಆಯುಕ್ತರ ನೇತೃತ್ವದಲ್ಲಿ ಡಿಜೆ ಮಾಲೀಕರ ಸಭೆ ನಡೆಸಲಾಯಿತು. ಈ ವೇಳೆ ಹುಬ್ಬಳ್ಳಿ-ಧಾರವಾಡ ಸೌಂಡ್‌ ಸಿಸ್ಟಮ್‌ ಆ್ಯಂಡ್‌ ಲೈಟ್‌ ಅಸೋಷಿಯೇಷನ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಪೊಲೀಸ್‌ ಆಯುಕ್ತರು, ದೇಶದ ವಿವಿಧೆಡೆ ಡಿಜೆ ಸೌಂಡ್‌ನಿಂದ ಸಂಭವಿಸಿರುವ ಅನಾಹುತಗಳ ಕುರಿತು ಮಾಧ್ಯಮ ವರದಿಗಳ ಆಧಾರದಲ್ಲಿ ಮಾಹಿತಿ ನೀಡಿದರು. ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.

ಸೌಂಡ್‌ ಸಿಸ್ಟಮ್‌ ಉದ್ಯಮವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ಲಕ್ಷಾಂತರ ರುಪಾಯಿ ಖರ್ಚು ಮಾಡಿ ಉಪಕರಣಗಳನ್ನು ಖರೀದಿಸಲಾಗಿದೆ. ಹೋಳಿ ಹಾಗೂ ಗಣೇಶೋತ್ಸವದ ಸಂದರ್ಭದಲ್ಲಿ ಮಾತ್ರ ಸೌಂಡ್‌ ಸಿಸ್ಟಮ್‌ಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಪೊಲೀಸರ ಎಲ್ಲ ಸೂಚನೆಗಳನ್ನು ಪಾಲಿಸಿ, ನಿಯಮಾವಳಿ ಮೀರಿ ಡಿಜೆ ಬಳಸುವುದಿಲ್ಲ. ಆದರೆ, ರಾತ್ರಿ 10ರ ಬದಲಾಗಿ 12 ಗಂಟೆ ವರೆಗೆ ಡಿಜೆ ಬಳಕೆಗೆ ಅವಕಾಶ ನೀಡಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್‌ ಆಯುಕ್ತರು, ಯಾವುದೇ ಕಾರಣಕ್ಕೂ ರಾತ್ರಿ 10ರ ನಂತರ ಡಿಜೆ ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಷಪ್ಟಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್‌ ಪೂಜಾರಿ ದ.ಕ. ಕಾಂಗ್ರೆಸ್‌ ಅಧ್ಯಕ್ಷ
ಮಹದಾಯಿ ನೀರು, ವಿಮಾನ ನಿಲ್ದಾಣಗಳ ನಾಮಕರಣಕ್ಕೆ ಆಗ್ರಹಿಸಿ ಸೆ. 13ರಂದು ಟ್ರ್ಯಾಕ್ಟರ್ ರ‍್ಯಾಲಿ