ಬಂಟ್ವಾಳದ ಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಭೇಟಿ

KannadaprabhaNewsNetwork |  
Published : Apr 20, 2024, 01:05 AM IST
ಬಂಟ್ವಾಳ ಸೂಕ್ಷ್ಮ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಭೇಟಿ | Kannada Prabha

ಸಾರಾಂಶ

ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ತಪಾಸಣಾ ಕಾರ್ಯ ಪರಿಶೀಲಿಸಿದರು.

ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು.

ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿದ ಅವರು ದ.ಕ. ಜಿ.ಪಂ.ಹಿ.ಪ್ರಾ. ಶಾಲೆ ಕೊಡಂಗೆ ಬಿ ಮೂಡಾ ಇಲ್ಲಿರುವ ಮತಗಟ್ಟೆ ಸಂಖ್ಯೆ 122, 123 ಮತ್ತು 124 ಗಳಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತಹಸೀಲ್ದಾರ್‌ ಅರ್ಚನಾ ಭಟ್‌, ಚುನಾವಣಾ ಉಪತಹಸೀಲ್ದಾರ್‌ ನವೀನ್‌ ಕುಮಾರ್‌ ಬೆಂಜನಪದವು, ಕಂದಾಯ ನಿರೀಕ್ಷಕರಾದ ಜನಾರ್ದನ ಜೆ., ವಿಜಯ್‌ ಆರ್.‌, ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ ನಾಯಕ್‌, ಮತಗಟ್ಟೆ ಅಧಿಕಾರಿಗಳಾದ ಜ್ಯೋತಿ, ಸೌಮ್ಯ, ಆಶಾ ಉಪಸ್ಥಿತರಿದ್ದರು. ಚೆಕ್‌ ಪೋಸ್ಟ್‌ ಪರಿಶೀಲನೆ ನಡೆಸಿದ ಡಿಸಿಮಂಗಳೂರು: ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ತಪಾಸಣಾ ಕಾರ್ಯ ಪರಿಶೀಲಿಸಿದರು.

ಚೆಕ್‌ಪೋಸ್ಟ್‌ನಲ್ಲಿದ್ದ ಅಧಿಕಾರಿಗಳು, ಸಿಬ್ಬಂದಿಗೆ ಅಗತ್ಯ ಸಲಹೆ ಸೂಚನೆಗಳನ್ನು ಜಿಲ್ಲಾಧಿಕಾರಿ ನೀಡಿದರು.ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಹಾಗೂ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ