ಕನ್ನಡಪ್ರಭ ವಾರ್ತೆ ರಾಮನಗರ
ಬೆಂಗಳೂರಿನ ಲೋಕಭವನದಲ್ಲಿ ಸಂಜೆ 4 ಗಂಟೆ 5 ನಿಮಿಷಕ್ಕೆ ಡಿ.ಕೆ.ಶಿವಕುಮಾರ್ ರವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಂತಸಗೊಂಡ ಕಾರ್ಯಕರ್ತರು ವೃತ್ತದಲ್ಲಿ ಪಟಾಕಿ ಸಿಡಿಸಿದರೆ, ಮಹಿಳಾ ಮುಖಂಡರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಪಟ್ಟರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಮಂಗಳಮ್ಮ ಶಂಭೂಗೌಡ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ಕೆಂಗಲ್ ಆಂಜನೇಯ, ಶನಿದೇವರು, ಮಂಟೇದಲಿಂಗಯ್ಯ ದೇವರುಗಳಲ್ಲಿ ಮಹಿಳಾ ಮುಖಂಡರು ಹರಕೆ ಹೊತ್ತು ಪಾದ ಕೇಳಿದ್ದೆವು. ನಮ್ಮ ಪ್ರಾರ್ಥನೆಗೆ ದೇವರು ಫಲ ಕೊಟ್ಟಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದರು.ಡಿಕೆಶಿರವರ ಸ್ಫೂರ್ತಿಯಿಂದಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿ ಸಂಘಟನೆಯಾಗಿದೆ. ಅವರ ಮಾರ್ಗದರ್ಶನದಲ್ಲಿ ಮಹಿಳೆಯರಾದ ನಾವುಗಳು ಸೂಕ್ತ ಸ್ಥಾನಮಾನ ಪಡೆಯಲು ಸಾಧ್ಯವಾಗಿದೆ. ಡಿಕೆಶಿರವರ ಸಹಕಾರದಿಂದ ನಾನು ನಗರಸಭೆ ಸದಸ್ಯಳಾಗಿ, ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದೇವೆ. ಡಿಕೆಶಿ ಸಂಘಟನಾ ಚತುರ ಎಂದು ಗುಣಗಾನ ಮಾಡಿದರು.
ಜಿಲ್ಲಾ ಪಂಚಾಯಿಯಿ ಮಾಜಿ ಸದಸ್ಯೆ ಮಂಜುಳಾ ಮರಿದೇವರು, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ ಗುರುವೇಗೌಡ, ಸದಸ್ಯರಾದ ವಿಜಯಕುಮಾರಿ ಮಹಿಳಾ ಮುಖಂಡರಾದ ಲೀಲಾವತಿ, ಗೀತಾ, ಶೀಲಾ ಮತ್ತಿತರರು ಹಾಜರಿದ್ದರು.