ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ಈ ವೇಳೆ ಮಾತನಾಡಿದ ಯಲುವಹಳ್ಳಿ ಎನ್. ರಮೇಶ್, ಶಿವಕುಮಾರ್ ಅವರು ಹಲ ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ದುಡಿದು ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕನಕಪುರ ಬಂಡೆ ಎಂದೆ ಪ್ರಸಿದ್ಧರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ ದುಡಿದು ತಳಮಟ್ಟದಿಂದ ಪಕ್ಷವನ್ನು ಕಟ್ಟಿದ ಅವರು ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆ ಹೊಂದಿದ್ದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಅವರ ಜೊತೆಗೆ ಡಿ.ಕೆ. ಶಿವಕುಮಾರ್ ಶ್ರಮವೂ ಮಹತ್ವದ್ದಾಗಿದೆ ಎಂದರು.
ಶಿವಕುಮಾರ್ ಜೈಲಿನಲ್ಲಿ ಇದ್ದಾಗ ಇದೇ ವೀರಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಅದರ ಕೆಲ ದಿನಗಳಲ್ಲಿ ಅವರು ಬಿಡುಗಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ 15 ರಂದು 108 ತೆಂಗಿನಕಾಯಿ ಒಡೆಯಲಾಗಿತ್ತು. ಅವರು ಮುಖ್ಯಮಂತ್ರಿ ಆದರೆ ಸಾವಿರದ ಎಂಟು ತೆಂಗಿನಕಾಯಿ ಒಡೆಯುವ ಹರಕೆ ಮಾಡಿಕೊಂಡಿದ್ದೆವು. ದಿಲ್ಲಿ ಪೂಜೆ ಸಲ್ಲಿಸಿ ಎಂಟು ದಿನ ಕಳೆಯುವುದರಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಇಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಲ್ಲರಿಗೂ ಸಂತಸ ತಂದಿದೆ ಎಂದರು.ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ನಗರದ ಬಿಬಿ ರಸ್ತೆಯ ಯಲುವಹಳ್ಳಿ ಎನ್.ರಮೇಶ್ ಅವರ ಕಾರ್ಯಾಲಯದ ಬಳಿ ಅಭಿಮಾನಿ ಬಳಗ ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸಿಕೆಬಿ-2