ಡಿಕೆ ಶಿವಕುಮಾರ್‌ಗೆ ಎಸ್.ಎಂ. ಕೃಷ್ಣ ರಾಜಕೀಯ ಗಾಡ್ ಫಾದರ್

KannadaprabhaNewsNetwork |  
Published : Dec 11, 2024, 12:48 AM IST
10ಕೆಆರ್ ಎಂಎನ್ 11,12.ಜೆಪಿಜಿಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಂದ ಡಿ.ಕೆ.ಶಿವಕುಮಾರ್ ಆಶೀರ್ವಾದ ಪಡೆಯುತ್ತಿರುವುದು. | Kannada Prabha

ಸಾರಾಂಶ

ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪರವರ ನಂತರ ಎಸ್.ಎಂ.ಕೃಷ್ಣ ಅವರನ್ನು ಮೆಚ್ಚಿಕೊಂಡಿದ್ದರು. ಅವರ ರಾಜಕೀಯ ಬೆಳವಣಿಗೆಯ ಪ್ರತಿ ಹೆಜ್ಜೆಯಲ್ಲಿ ಕೃಷ್ಣ ಅವರೇ ಮಾರ್ಗದರ್ಶಕರಾಗಿದ್ದರು.

ರಾಮನಗರ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ತಮ್ಮ ಸನ್ನಡತೆ, ಶುದ್ಧ ಚಾರಿತ್ರ್ಯ, ವಿದ್ವತ್ ಪೂರ್ಣ ಮಾತುಗಾರಿಕೆ ಹಾಗೂ ಸ್ನೇಹಮಯ ವ್ಯಕ್ತಿತ್ವಗಳಿಂದ ರಾಜಕೀಯ ರಂಗದ ಎದುರಾಳಿಗಳಿಂದಲೂ ಪ್ರಶಂಸೆಗೆ ಪಾತ್ರರಾದ ಅಪರೂಪದ ವ್ಯಕ್ತಿಯಾಗಿದ್ದರು.ಅವರಿಂದ ಆಕರ್ಷಿತರಾದ ರಾಜಕಾರಣಿಗಳೇ ಇರಲಿಲ್ಲ. ಅಂಥವರ ಸಾಲಿಗೆ ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರ ಶಾಸಕರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಸೇರಿದವರು. ಎಸ್.ಎಂ. ಕೃಷ್ಣ ಅವರನ್ನೇ ಡಿ.ಕೆ.ಶಿವಕುಮಾರ್ ರವರು ರಾಜಕಾರಣದ ಗಾಡ್ ಫಾದರ್ ಆಗಿ ಸ್ವೀಕರಿದ್ದರು.ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪರವರ ನಂತರ ಎಸ್.ಎಂ.ಕೃಷ್ಣ ಅವರನ್ನು ಮೆಚ್ಚಿಕೊಂಡಿದ್ದರು. ಅವರ ರಾಜಕೀಯ ಬೆಳವಣಿಗೆಯ ಪ್ರತಿ ಹೆಜ್ಜೆಯಲ್ಲಿ ಕೃಷ್ಣ ಅವರೇ ಮಾರ್ಗದರ್ಶಕರಾಗಿದ್ದರು. ಕಾಲಾನಂತರ ಕೃಷ್ಣ ಮತ್ತು ಡಿ.ಕೆ.ಶಿವಕುಮಾರ್ ರವರ ಕುಟುಂಬಗಳು ಒಂದಾಗುತ್ತಿದ್ದಂತೆ ಇಬ್ಬರ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಯಿತು.

1991 ರಲ್ಲಿ ಎಸ್.ಎಂ. ಕೃಷ್ಣ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು. ಅವರಿಗೆ ಡಿ.ಕೆ.ಶಿವಕುಮಾರ್ ಬೆನ್ನೆಲುಬಾಗಿ ನಿಂತರು. ವಿಧಾನಸಭಾ ಚುನಾವಣೆಯಲ್ಲಿ ಪಾಂಚಜನ್ಯ ಮೊಳಗಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ರೀತಿಯಲ್ಲಿ ಜಯ ಗಳಿಸುವಂತೆ ಮಾಡಿದರು.

ಆ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಸಾತನೂರು ಕ್ಷೇತ್ರದಲ್ಲಿ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಮಣಿಸಿದ್ದರು. ಆನಂತರ ಕೃಷ್ಣರವರ ನೇತೃತ್ವದ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಹಾಗೂ ಸಹಕಾರ ಖಾತೆ ಸಚಿವರಾದರು. ಅಲ್ಲದೆ, ರಾಜ್ಯ ನಗರ ಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಕೃಷ್ಣರವರ ಸೂಚನೆ ಮೇರೆಗೆಯೇ ಡಿ.ಕೆ.ಶಿವಕುಮಾರ್ ರವರು 2002ರ ಕನಕಪುರ ಲೋಕಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್‌ನ ಪ್ರಬಲ ನಾಯಕ ಎಚ್.ಡಿ.ದೇವೇಗೌಡ ವಿರುದ್ಧ ತೊಡೆ ತಟ್ಟಿದ್ದರು.

--------

10ಕೆಆರ್ ಎಂಎನ್ 11,12.ಜೆಪಿಜಿ

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಂದ ಡಿ.ಕೆ.ಶಿವಕುಮಾರ್ ಆಶೀರ್ವಾದ ಪಡೆಯುತ್ತಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ