ಡಿ.ಕೆ.ಶಿವಕುಮಾರ್‌ ನಟ್ಟು- ಬೋಲ್ಟ್ ಹೇಳಿಕೆ ತಪ್ಪಲ್ಲ : ಫಿಲಂ ಚೇಂಬರ್‌ ಅಧ್ಯಕ್ಷ ಎಂ.ಎಸ್‌. ರವೀಂದ್ರ

KannadaprabhaNewsNetwork |  
Published : Mar 06, 2025, 12:33 AM ISTUpdated : Mar 06, 2025, 09:08 AM IST
ರವೀಂದ್ರ | Kannada Prabha

ಸಾರಾಂಶ

ಈಚೆಗೆ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚಲನ ಚಿತ್ರರಂಗದವರ ನಟ್ಟು-ಬೋಲ್ಟ್‌ ಟೈಟ್‌ ಮಾಡುವುದು ಹೇಗೆಂದು ನನಗೆ ಗೊತ್ತು ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಕನ್ನಡ ಫಿಲಂ ಚೇಂಬರ್‌ ಅಧ್ಯಕ್ಷ ಎಂ.ಎಸ್‌. ರವೀಂದ್ರ ಅವರು ಸಮರ್ಥಿಸಿಕೊಂಡಿದ್ದಾರೆ.

 ಹುಬ್ಬಳ್ಳಿ : ಈಚೆಗೆ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚಲನ ಚಿತ್ರರಂಗದವರ ನಟ್ಟು-ಬೋಲ್ಟ್‌ ಟೈಟ್‌ ಮಾಡುವುದು ಹೇಗೆಂದು ನನಗೆ ಗೊತ್ತು ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಕನ್ನಡ ಫಿಲಂ ಚೇಂಬರ್‌ ಅಧ್ಯಕ್ಷ ಎಂ.ಎಸ್‌. ರವೀಂದ್ರ ಅವರು ಸಮರ್ಥಿಸಿಕೊಂಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭರ್ಜರಿ ಪರ - ವಿರೋಧ ಚರ್ಚೆಗಳು ನಡೆಯುತ್ತಿರುವ ಮಧ್ಯೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವೀಂದ್ರ ಅವರು, ಡಿಕೆಶಿ ಹೇಳಿಕೆಯನ್ನು ಸಮರ್ಥಿಸಿದರು. ಮಾ.1ರಂದು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸೆಲೆಬ್ರಿಟಿಗಳು ಪಾಲ್ಗೊಳ್ಳದೆ ಇರುವುದಕ್ಕೆ ಡಿ.ಕೆ. ಶಿವಕುಮಾರ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ದೊಡ್ಡ ಕಾರ್ಯಕ್ರಮ ಮಾಡಿದಾಗ ನಿರೀಕ್ಷಿತ ಮಟ್ಟದಲ್ಲಿ ಸೆಲೆಬ್ರಿಟಿಗಳು ಬಾರದಿರುವುದರಿಂದ ಬೇಸರವಾದ ಕಾರಣ ಈ ರೀತಿಯ ಹೇಳಿಕೆ ನೀಡುವುದು ಸಹಜ ಎಂದು ಅವರು ತಿಳಿಸಿದರು.

ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ, ಚಲನಚಿತ್ರ ಅಕಾಡೆಮಿಯವರು ಯಾರಿಗೂ ಸರಿಯಾಗಿ ಆಹ್ವಾನ ನೀಡಿಲ್ಲ. ಹಾಗಾಗಿ, ಬಹಳಷ್ಟು ನಟರು ಕಾರ್ಯಕ್ರಮಕ್ಕೆ ಬರುವುದಕ್ಕೆ ಸಾಧ್ಯವಾಗಿಲ್ಲ. ಆದರೆ, ಈ ವಿಚಾರ ಡಿ.ಕೆ. ಶಿವಕುಮಾರ್ ಅವರಿಗೆ ಗೊತ್ತಿರಲಿಲ್ಲ. ಹೀಗಾಗಿ, ಈ ರೀತಿಯ ಹೇಳಿಕೆ ನೀಡಿದ್ದಾರೆ ಅಷ್ಟೆ ಎಂದು ಅವರು ವಿವರಿಸಿದರು. ನೆಲ,-ಜಲ ವಿಷಯದಲ್ಲಿ ಎಂದೂ ಸೆಲೆಬ್ರಿಟಿಗಳು ನಿರ್ಲಕ್ಷ್ಯ ಮಾಡಿಲ್ಲ. ಕನ್ನಡಿಗರ ಜತೆ ಚಿತ್ರೋದ್ಯಮ ಸದಾ ಇದ್ದೇ ಇರುತ್ತದೆ ಎಂದು ಅವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''